ಬ್ರೇಕಿಂಗ್ ನ್ಯೂಸ್
16-09-24 02:07 pm Mangalore Correspondent ಕರಾವಳಿ
ಮಂಗಳೂರು, ಸೆ.16: ಸುರತ್ಕಲ್ ಬಳಿಯ ಕಾಟಿಪಳ್ಳದಲ್ಲಿ ಮಸೀದಿಗೆ ಕಲ್ಲು ತೂರಿದ ಪ್ರಕರಣ ಸಂಬಂಧಿಸಿ ಸುರತ್ಕಲ್ ಪೊಲೀಸರು ಆರು ಮಂದಿ ಆರೋಪಿಗಳನ್ನು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ಕಾಟಿಪಳ್ಳದ ಮೂರನೇ ಬ್ಲಾಕ್ ವ್ಯಾಪ್ತಿಯ ಜುಮ್ಮಾ ಮಸೀದಿಗೆ ನಿನ್ನೆ ತಡರಾತ್ರಿ ಬೈಕಿನಲ್ಲಿ ಬಂದ ಯುವಕರು ಕಲ್ಲು ತೂರಾಟ ನಡೆಸಿದ್ದರು. ಕಾಟಿಪಳ್ಳ ಆಶ್ರಯ ಕಾಲನಿಯ ಭರತ್ ಶೆಟ್ಟಿ(26), ಅದೇ ಪ್ರದೇಶದ ನಿವಾಸಿ ಚೆನ್ನಪ್ಪ ಶಿವಾನಂದ ಚಲವಾದಿ(19), ಸುರತ್ಕಲ್ ಚೇಳಾರು ಗ್ರಾಮದ ನಿತಿನ್ ಹಡಪ(22), ಕೊಡಿಪಾಡಿ ಮುಂಚೂರು ನಿವಾಸಿ ಸುಜಿತ್ ಶೆಟ್ಟಿ(23), ಹೊಸಬೆಟ್ಟು ಗ್ರಾಮದ ಅಣ್ಣಪ್ಪ ಅಲಿಯಾಸ್ ಮನು(24) ಮತ್ತು ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಪ್ರೀತಮ್ ಶೆಟ್ಟಿ(34) ಬಂಧಿತರು.

ಭರತ್ ಸುರತ್ಕಲ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, ಈ ಹಿಂದೆ ಕೊಲೆಯತ್ನ ಸೇರಿದಂತೆ 12 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ. ನಿತಿನ್ ಮೇಲೆ ಈ ಹಿಂದೆ ಒಂದು ಪ್ರಕರಣ, ಅಣ್ಣಪ್ಪ ಮೇಲೆ ಎರಡು ಪ್ರಕರಣ, ಪ್ರೀತಮ್ ಶೆಟ್ಟಿ ಮೇಲೆ ಈ ಹಿಂದೆ ಎರಡು ಪ್ರಕರಣ ದಾಖಲಾಗಿತ್ತು. ಆರೋಪಿಗಳಿಂದ ಒಂದು ಸ್ವಿಫ್ಟ್ ಕಾರು, 2 ಬೈಕು, ನಾಲ್ಕು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.
ನಿನ್ನೆ ರಾತ್ರಿ 10 ಗಂಟೆ ವೇಳೆಗೆ ಎರಡು ಬೈಕಿನಲ್ಲಿ ಬಂದಿದ್ದ ಯುವಕರು ಮಸೀದಿಯತ್ತ ಕಲ್ಲು ತೂರಿ ಪರಾರಿಯಾಗಿದ್ದರು. ಮಸೀದಿಯ ಹಿಂಭಾಗದ ಕಿಟಕಿಗೆ ಬಿದ್ದಿದ್ದ ಕಲ್ಲಿನಿಂದ ಗಾಜಿನ ಗ್ಲಾಸು ಪುಡಿಯಾಗಿತ್ತು. ಕೂಡಲೇ ಮಸೀದಿ ಕಮಿಟಿಯವರು ಸುರತ್ಕಲ್ ಪೊಲೀಸರಿಗೆ ತಿಳಿಸಿದ್ದು, ಪೊಲೀಸರು ಬಂದೋಬಸ್ತ್ ಮಾಡಿದ್ದರು. ಒಂದು ಬೈಕಿನಲ್ಲಿ ಮೂವರು, ಇನ್ನೊಂದರಲ್ಲಿ ಇಬ್ಬರು ಜನತಾ ಕಾಲನಿ ಕಡೆಯಿಂದ ಬಂದಿರುವುದನ್ನು ಪೊಲೀಸರು ಸಿಸಿಟಿವಿಯಲ್ಲಿ ಗಮನಿಸಿದ್ದು, ಗಣೇಶ್ ಕಟ್ಟೆ ಮೂಲಕ ಪರಾರಿಯಾಗಿದ್ದರು ಎಂಬುದನ್ನು ಪತ್ತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ರಾತ್ರಿಯೇ ಕಾರ್ಯಾಚರಣೆ ನಡೆಸಿದ್ದರು. ಹೇಳಿಕೆಯಲ್ಲಿ ಕದ್ರಿ ಪರಿಸರದಲ್ಲಿ ಆರೋಪಿಗಳನ್ನು ಬಂಧಿಸಿದ್ದಾಗಿ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.
Police have arrested five individuals in connection with the stone pelting incident at the Masjidul Huda Juma Masjid in Katipalla 3rd Block, managed by the Krishnapura Muslim Jamaat.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm