ಬ್ರೇಕಿಂಗ್ ನ್ಯೂಸ್
10-12-20 12:07 pm Mangalore Correspondent ಕರಾವಳಿ
ಬೆಳ್ತಂಗಡಿ, ಡಿ.10: ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಶ್ರೀ ಮಂಜುನಾಥ ಸ್ವಾಮಿಯ ಲಕ್ಷ ದೀಪೋತ್ಸವ ಇಂದಿನಿಂದ ಡಿ.14 ರ ವರೆಗೆ ನಡೆಯಲಿದೆ. 13 ಮತ್ತು 14 ರಂದು 88ನೇ ವರ್ಷದ ಸರ್ವಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನ ನಡೆಯಲಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸರಕಾರದ ನಿಯಮಗಳನ್ನು ಪಾಲಿಸಿಕೊಂಡು ಸರಳವಾಗಿ ಲಕ್ಷದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಡಿ.10ರಂದು ಶ್ರೀ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ಡಿ.14ರಂದು ಗೌರಿಮಾರುಕಟ್ಟೆ ಉತ್ಸವದೊಂದಿಗೆ ಸಂಪನ್ನಗೊಳ್ಳಲಿದೆ.


ಲಕ್ಷ ದೀಪೋತ್ಸವದ ಯಶಸ್ವಿಗಾಗಿ ಕ್ಷೇತ್ರದಿಂದ ಸಮಿತಿಗಳನ್ನು ರಚಿಸಲಾಗಿದ್ದು, ಸಕಲ ಸಿದ್ದತೆಗಳನ್ನು ನಡೆಸಲಾಗಿದೆ. ದೇವರು ಸವಾರಿ ಮಾಡುವ ರಥಬೀದಿ, ರಾಜ ಬೀದಿಗಳನ್ನು, ದೇವಸ್ಥಾನ, ಬೀಡು, ಅನ್ನಪೂರ್ಣ ಸೇರಿದಂತೆ ಕ್ಷೇತ್ರದಲ್ಲಿ ವಿದ್ಯುದ್ದೀಪಗಳಿಂದ ಅಲಂಕೃತಗೊಳಿಸಲಾಗಿದೆ.
ಭಕ್ತರ ಸುರಕ್ಷತೆಯ ನಿಟ್ಟಿನಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತಿದೆ. ಕ್ಷೇತ್ರಕ್ಕೆ ಬರುವ ಭಕ್ತರು ಮಾಸ್ಕ್ ಕಡ್ಡಾಯ ಧಾರಣೆ ಮಾಡಬೇಕು. ವಸ್ತು ಪ್ರದರ್ಶನ ಹಾಗೂ ಬೀದಿ ಬದಿಯ ಅಂಗಡಿಗಳು ಇರುವುದಿಲ್ಲ. ಸರಕಾರದ ನಿಯಮದಂತೆ ಅಗತ್ಯ ಕ್ರಮಗಳೊಂದಿಗೆ ದೀಪೋತ್ಸವ ಸರಳವಾಗಿ ಆಚರಣೆಗೊಳ್ಳಲಿದೆ. ಈ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಗಳನ್ನು ಮನೆಯಲ್ಲೇ ಕುಳಿತು ವೀಕ್ಷಣೆ ಮಾಡಲು ಅವಕಾಶ ಮಾಡಲಾಗಿದೆ. ’ಶ್ರೀ ಕ್ಷೇತ್ರ ಧರ್ಮಸ್ಥಳ’ ಹೆಸರಿನ ಯೂಟ್ಯೂಬ್, ಫೇಸ್ಬುಕ್ ಹಾಗೂ ನಮ್ಮ ಕುಡ್ಲ, ಶ್ರೀಶಂಕರ ಟಿವಿಯಲ್ಲಿ ನೇರ ವೀಕ್ಷಣೆಗೆ ಕ್ಷೇತ್ರದಿಂದ ಅವಕಾಶ ಮಾಡಲಾಗಿದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
A Laksha Deepotsava will be held at Dharmasthala for four days from December 10, 2020.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm