ಬ್ರೇಕಿಂಗ್ ನ್ಯೂಸ್
19-09-24 04:53 pm HK News Desk ಕರಾವಳಿ
ಮಂಗಳೂರು, ಸೆ.19: ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಗೆ ವಿಧಾನ ಪರಿಷತ್ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 26ರಂದು ಪರಿಷತ್ ಚುನಾವಣೆಗೆ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನ. 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯ ವರೆಗೆ ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ಎರಡು ಜಿಲ್ಲೆಗಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಹೀಗಾಗಿ ಶಾಸಕ, ಸಂಸದರು ಅಧಿಕಾರಿಗಳ ಜೊತೆಗೆ ಸಭೆ ನಡೆಸುವಂತಿಲ್ಲ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸಂಜೆ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಕರೆಯಲಾಗಿದ್ದ ರೈಲ್ವೆ ಅಧಿಕಾರಿಗಳ ಸಭೆಯನ್ನು ರದ್ದುಪಡಿಸಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ಕಳೆದ ಮೇ 5ರಂದು ತಮ್ಮ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರ ಪರಿಷತ್ ಅವಧಿ 2028ರ ವರೆಗೆ ಇದೆ. ಉಳಿಕೆ ಅವಧಿಗೆ ಸದಸ್ಯರಾಗಲು ಉಪ ಚುನಾವಣೆ ನಡೆಸಲಾಗುತ್ತಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಗ್ರಾಪಂ, ಜಿಪಂ, ನಗರ ಪಂ., ಪುರಸಭೆ, ಮಹಾನಗರ ಪಾಲಿಕೆ ಹೀಗೆ ಎಲ್ಲ ಸ್ತರದ ಸ್ಥಳೀಯಾಡಳಿತ ಸದಸ್ಯರಿಗೆ ಮತದಾನ ಅವಕಾಶ ಇರುತ್ತದೆ.
ಕರ್ನಾಟಕ ವಿಧಾನ ಪರಿಷತ್ ನ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗ ಇಂದು ಉಪಚುನಾವಣೆಯನ್ನು ಘೋಷಿಸಿದೆ. pic.twitter.com/r5DuKNqmrr
— Chief Electoral Officer, Karnataka (@ceo_karnataka) September 19, 2024
By elections date announced for vacant post of Kota Srinivas Poojary on october 21st, 2024
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm