ಬ್ರೇಕಿಂಗ್ ನ್ಯೂಸ್
19-09-24 04:53 pm HK News Desk ಕರಾವಳಿ
ಮಂಗಳೂರು, ಸೆ.19: ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಗೆ ವಿಧಾನ ಪರಿಷತ್ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 26ರಂದು ಪರಿಷತ್ ಚುನಾವಣೆಗೆ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನ. 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯ ವರೆಗೆ ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ಎರಡು ಜಿಲ್ಲೆಗಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಹೀಗಾಗಿ ಶಾಸಕ, ಸಂಸದರು ಅಧಿಕಾರಿಗಳ ಜೊತೆಗೆ ಸಭೆ ನಡೆಸುವಂತಿಲ್ಲ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸಂಜೆ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಕರೆಯಲಾಗಿದ್ದ ರೈಲ್ವೆ ಅಧಿಕಾರಿಗಳ ಸಭೆಯನ್ನು ರದ್ದುಪಡಿಸಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ಕಳೆದ ಮೇ 5ರಂದು ತಮ್ಮ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರ ಪರಿಷತ್ ಅವಧಿ 2028ರ ವರೆಗೆ ಇದೆ. ಉಳಿಕೆ ಅವಧಿಗೆ ಸದಸ್ಯರಾಗಲು ಉಪ ಚುನಾವಣೆ ನಡೆಸಲಾಗುತ್ತಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಗ್ರಾಪಂ, ಜಿಪಂ, ನಗರ ಪಂ., ಪುರಸಭೆ, ಮಹಾನಗರ ಪಾಲಿಕೆ ಹೀಗೆ ಎಲ್ಲ ಸ್ತರದ ಸ್ಥಳೀಯಾಡಳಿತ ಸದಸ್ಯರಿಗೆ ಮತದಾನ ಅವಕಾಶ ಇರುತ್ತದೆ.
ಕರ್ನಾಟಕ ವಿಧಾನ ಪರಿಷತ್ ನ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗ ಇಂದು ಉಪಚುನಾವಣೆಯನ್ನು ಘೋಷಿಸಿದೆ. pic.twitter.com/r5DuKNqmrr
— Chief Electoral Officer, Karnataka (@ceo_karnataka) September 19, 2024
By elections date announced for vacant post of Kota Srinivas Poojary on october 21st, 2024
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am