ಬ್ರೇಕಿಂಗ್ ನ್ಯೂಸ್
19-09-24 04:53 pm HK News Desk ಕರಾವಳಿ
ಮಂಗಳೂರು, ಸೆ.19: ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಗೆ ವಿಧಾನ ಪರಿಷತ್ ಕ್ಷೇತ್ರದ ಉಪ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.
ಸೆಪ್ಟೆಂಬರ್ 26ರಂದು ಪರಿಷತ್ ಚುನಾವಣೆಗೆ ಅಧಿಸೂಚನೆ ಜಾರಿಗೆ ಬರಲಿದ್ದು, ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನ. 4ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಗ್ಗೆ 8ರಿಂದ ಸಂಜೆ 4 ಗಂಟೆಯ ವರೆಗೆ ಎರಡು ಜಿಲ್ಲೆಗಳ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಇಂದಿನಿಂದಲೇ ಎರಡು ಜಿಲ್ಲೆಗಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಹೀಗಾಗಿ ಶಾಸಕ, ಸಂಸದರು ಅಧಿಕಾರಿಗಳ ಜೊತೆಗೆ ಸಭೆ ನಡೆಸುವಂತಿಲ್ಲ. ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಸಂಜೆ ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಕರೆಯಲಾಗಿದ್ದ ರೈಲ್ವೆ ಅಧಿಕಾರಿಗಳ ಸಭೆಯನ್ನು ರದ್ದುಪಡಿಸಲಾಗಿದೆ.
ಕೋಟ ಶ್ರೀನಿವಾಸ ಪೂಜಾರಿ ಕಳೆದ ಮೇ 5ರಂದು ತಮ್ಮ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಅವರ ಪರಿಷತ್ ಅವಧಿ 2028ರ ವರೆಗೆ ಇದೆ. ಉಳಿಕೆ ಅವಧಿಗೆ ಸದಸ್ಯರಾಗಲು ಉಪ ಚುನಾವಣೆ ನಡೆಸಲಾಗುತ್ತಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ಚುನಾವಣೆಗೆ ಸಿದ್ಧತೆ ಆರಂಭಿಸಿದೆ. ಗ್ರಾಪಂ, ಜಿಪಂ, ನಗರ ಪಂ., ಪುರಸಭೆ, ಮಹಾನಗರ ಪಾಲಿಕೆ ಹೀಗೆ ಎಲ್ಲ ಸ್ತರದ ಸ್ಥಳೀಯಾಡಳಿತ ಸದಸ್ಯರಿಗೆ ಮತದಾನ ಅವಕಾಶ ಇರುತ್ತದೆ.
ಕರ್ನಾಟಕ ವಿಧಾನ ಪರಿಷತ್ ನ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಭಾರತ ಚುನಾವಣಾ ಆಯೋಗ ಇಂದು ಉಪಚುನಾವಣೆಯನ್ನು ಘೋಷಿಸಿದೆ. pic.twitter.com/r5DuKNqmrr
— Chief Electoral Officer, Karnataka (@ceo_karnataka) September 19, 2024
By elections date announced for vacant post of Kota Srinivas Poojary on october 21st, 2024
19-03-25 04:42 pm
HK News Desk
"ಹೆಂಗಸರಿಗೆ ಫ್ರೀ ಕೊಟ್ಟಂತೆ ಗಂಡಸರಿಗೂ ವಾರಕ್ಕೆರಡು...
19-03-25 12:44 pm
Sowjanya case, Protest; ಸೌಜನ್ಯಾ ಪ್ರಕರಣ ; ನ್ಯಾ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
19-03-25 07:39 pm
HK News Desk
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
19-03-25 10:13 pm
Udupi Correspondent
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
19-03-25 08:27 pm
Mangalore Correspondent
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm