ಬ್ರೇಕಿಂಗ್ ನ್ಯೂಸ್
19-09-24 09:08 pm Mangalore Correspondent ಕರಾವಳಿ
ಉಳ್ಳಾಲ, ಸೆ.19: ಕೆಎ 19-20 ಯುನೈಟೆಡ್ ಆಫ್ ರೋಡರ್ಸ್ ಆಯೋಜಿಸಿರುವ ಕುಡ್ಲ ಚಾಲೆಂಜ್ ಸೀಸನ್ -4 ಆಫ್ ರೋಡಿಂಗ್ ಸ್ಪರ್ಧೆ ಮುಡಿಪು ನವೋದಯ ಶಾಲೆಯ ನಾರ್ಯಗುತ್ತು ಕ್ರೀಡಾಂಗಣದಲ್ಲಿ ಸೆ.21 ಮತ್ತು 22 ರಂದು ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟಕ ಅವಿನಾಶ್ ಅಡಪ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆ.ಎ 19-20 ಯುನೈಟೆಡ್ ಆಫ್ ರೋಡರ್ಸ್ ಐದು ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದು, ಈಗಾಗಲೇ 105 ವಾಹನಗಳು ಎಂಟ್ರಿ ಪಡೆದಿದ್ದು, ದೇಶದಲ್ಲೇ ಮೊದಲ ಬಾರಿಗೆ ಇಂತಹ ದೊಡ್ಡಮಟ್ಟಿನ ಆಫ್ ರೋಡಿಂಗ್ ಸ್ಫರ್ಧೆ ಆಯೋಜಿಸಲಾಗಿದೆ. ಪೆಟ್ರೋಲ್ ಸ್ಟಾಕ್, ಡಿಸೀಲ್ ಸ್ಟಾಕ್, ಸೇರಿದಂತೆ ಐದು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ಸಾರ್ವಜನಿಕರು ಸೂಚನೆಗಳನ್ನ ಪಾಲಿಸಿ ಸ್ಫರ್ಧೆ ವೀಕ್ಷಿಸುವಂತೆ ಕೋರಿದ್ದಾರೆ.




ಸುರಕ್ಷತೆ ದೃಷ್ಟಿಯಿಂದ ಸರಕಾರದ ಎಲ್ಲ ಇಲಾಖೆಗಳ ಅನುಮತಿ ಪಡೆದುಕೊಂಡಿದ್ದು, ಅಗ್ನಿಶಾಮಕ ದಳ, ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಆಂಬ್ಯುಲೆನ್ಸ್ ಹಾಗೂ ವೈದ್ಯರು ಸ್ಥಳದಲ್ಲಿ ಮೊಕ್ಕಾಂ ಹೂಡಲಿದ್ದಾರೆ. ಸ್ಕಿಲ್ಡ್ ವಾಹನಗಳಿಗೆ ಮಾತ್ರ ಅವಕಾಶವಿದ್ದು, ಸ್ಪರ್ಧಾಳುಗಳು ಸೇಫ್ಟಿ ವೆಲ್ಡ್ ರೂಲ್ ಬುಕ್ ನಲ್ಲಿರುವ ನಿಯಮಗಳನ್ನು ಕಡ್ಡಾಯ ಪಾಲಿಸಬೇಕಾಗಿದೆ. ರೋಲ್ ಗೇಜ್, ಹೆಲ್ಮೆಟ್ ಧರಿಸಿಯೇ ಟ್ರ್ಯಾಕ್ ಇಳಿಯತಕ್ಕದ್ದು. ಕರಾವಳಿ ಮೂಲದ ಖ್ಯಾತ ಆಫ್ ರೋಡರ್ ಅಶ್ವಿನ್ ನಾಯಕ್ ಸೇರಿದಂತೆ ವಿವಿಧ ರಾಜ್ಯಗಳ ಖ್ಯಾತಿಯನ್ನು ಹೊಂದಿರುವ ಆಫ್ ರೋಡರ್ ಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ಮಹಿಳಾ ಕ್ಲಾಸ್ ಗೂ ಎಂಟ್ರಿ
ಮಹಿಳೆಯರಿಗೂ ಉತ್ತೇಜನ ನೀಡುವ ಸಲುವಾಗಿ ಮಹಿಳಾ ವಿಭಾಗದ ಸ್ಪರ್ಧೆ ಆಯೋಜಿಸಲಾಗಿದೆ. ಈಗಾಗಲೇ 5 ಎಂಟ್ರಿಗಳನ್ನು ಮಹಿಳೆಯರು ಪಡೆದಿದ್ದಾರೆ. 8.5 ಲಕ್ಷ ರೂ. ವೆಚ್ಚದಲ್ಲಿ ವಿಜೇತರಿಗೆ ನಗದು ಪುರಸ್ಕಾರ ನೀಡಲಿದ್ದೇವೆ. ಜೊತೆಯಲ್ಲಿ ಸರ್ಫಿಂಗ್, ಕಯಾಕಿಂಗ್ ನಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಉದ್ದೇಶದಿಂದ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ. ಎರಡು ದಿನ ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ಸ್ಪರ್ಧೆ ಆಯೋಜಿಸಲಾಗಿದ್ದು, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್, ಸಂಸದ ಬ್ರಿಜೇಶ್ ಚೌಟ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ನಾಸೀರ್ ನಡುಪದವು, ವಿಜೇಶ್ ನಾಯ್ಕ್, ಖುಷಿತ್ ಕುಮಾರ್ ಉಪಸ್ಥಿತರಿದ್ದರು.
Kudla challenge season 4 competition for off roading in Mangalore on September 21 and 22. It is said to be India’s first event.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am