ಬ್ರೇಕಿಂಗ್ ನ್ಯೂಸ್
20-09-24 06:56 pm Mangalore Correspondent ಕರಾವಳಿ
ಮಂಗಳೂರು, ಸೆ.20: ಮಂಗಳೂರು ನಗರದ ಹೃದಯಭಾಗ ಎನಿಸಿರುವ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಮತ್ತು ವೃತ್ತ ನಿರ್ಮಾಣದ ಪ್ರಾಯೋಜಕತ್ವ ವಹಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಬಂದಿದೆ. ಬ್ಯಾಂಕಿನ ಸಿಇಓ ಮತ್ತು ಆಡಳಿತ ನಿರ್ದೇಶಕರಾಗಿರುವ ಎ. ಮಣಿಮೇಖಲೈ ಅವರು 75 ಲಕ್ಷ ವೆಚ್ಚದಲ್ಲಿ ಪ್ರತಿಮೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಅವರು ಇತ್ತೀಚೆಗೆ ಪ್ರತಿಮೆ ಮತ್ತು ಅಂಬೇಡ್ಕರ್ ವೃತ್ತದ ನೂತನ ನಕ್ಷೆಯನ್ನು ಬ್ಯಾಂಕಿನ ಸಿಇಓ ಮಣಿಮೇಖಲೈ ಅವರಿಗೆ ನೀಡುವ ಮೂಲಕ ಪ್ರತಿಮೆ ನಿರ್ಮಾಣದ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ಇದೇ ವೇಳೆ, ಕಾಮಗಾರಿಯನ್ನು ಅತಿ ಶೀಘ್ರದಲ್ಲಿ ನಿರ್ವಹಿಸುವ ಮೂಲಕ ಮುಂದಿನ ಡಿಸೆಂಬರ್ ಒಳಗಡೆ ಉದ್ಘಾಟನೆ ಮಾಡಲು ಅವಕಾಶ ಮಾಡುವಂತೆ ಮೇಯರ್, ಬ್ಯಾಂಕಿನ ಸಿಇಓ ಅವರಲ್ಲಿ ಕೇಳಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉಪ ಮೇಯರ್ ಸುನೀತಾ, ಪ್ರತಿಪಕ್ಷ ನಾಯಕ ಪ್ರವೀಣಚಂದ್ರ ಆಳ್ವ, ಕಾರ್ಪೊರೇಟರ್ ವಿನಯರಾಜ್, ಮಾಜಿ ಶಾಸಕ ಜೆ.ಆರ್ ಲೋಬೊ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ವಲಯ ಮುಖ್ಯಸ್ಥೆ ರೇಣು ನಾಯರ್, ಡಿಜಿಎಂ ರಾಜಮಣಿ, ಎಜಿಎಂ ಎನ್. ಗೋಪಿನಾಥ್, ಅಂಬೇಡ್ಕರ್ ವೃತ್ತದ ನಕ್ಷೆ- ವಿನ್ಯಾಸ ಸಿದ್ಧಪಡಿಸಿದ ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸಂಘ- ಸಂಸ್ಥೆಗಳ ಮಹಾ ಒಕ್ಕೂಟದ ಅಧ್ಯಕ್ಷ ಲೋಲಾಕ್ಷ ಉಪಸ್ಥಿತರಿದ್ದರು.
Mangalore CEO of Union Bank of India unveiled construction work of New Ambedkar Circle. MD & CEO of Union Bank of India Ms. A Manimekhalai unveiled the curtain of construction work of New Ambedkar Circle at the proposed junction in Mangalore , recently.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm