ಬ್ರೇಕಿಂಗ್ ನ್ಯೂಸ್
24-09-24 07:23 pm Mangalore Correspondent ಕರಾವಳಿ
ಮಂಗಳೂರು, ಸೆ.24: ಮೂಡಾ ಹಗರಣ ಕುರಿತು ಹೈಕೋರ್ಟ್ ತೀರ್ಪಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ನಗರದ ಪಿವಿಎಸ್ ವೃತ್ತದ ಬಳಿಯ ಜಿಲ್ಲಾ ಬಿಜೆಪಿ ಕಚೇರಿ ಮುಂದೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಇದು ಸತ್ಯಕ್ಕೆ ಸಂದ ಜಯವಾಗಿದೆ. ಮೂಡಾ ಹಗರಣವನ್ನು ಖಂಡಿಸಿ ಬಿಜೆಪಿ ಮೈಸೂರು ಚಲೋ ಯಾತ್ರೆ ನಡೆಸಿದ್ದಾಗ, ಇದು ರಾಜಕೀಯ ಷಡ್ಯಂತ್ರ. ಇದರಲ್ಲಿ ಯಾವುದೇ ಹುರುಳಿಲ್ಲ, ನಾನು ರಾಜೀನಾಮೆ ಕೊಡುವುದಿಲ್ಲ, ಬೇಕಿದ್ದರೆ ರಾಜ್ಯಪಾಲರೇ ರಾಜೀನಾಮೆ ಕೊಡಲಿ ಎಂದು ಭಂಡತನ ಪ್ರದರ್ಶಿಸಿದ್ದ ಸಿದ್ದರಾಮಯ್ಯನವರಿಗೆ ಹೈಕೋರ್ಟ್ ತೀರ್ಪು ಕಪಾಳ ಮೋಕ್ಷ ನೀಡಿದೆ. ಇವರ ಹಿಂಬಾಲಕರಂತೂ ರಾಜ್ಯಪಾಲರನ್ನು ಬಾಂಗ್ಲಾ ಮಾದರಿಯಲ್ಲಿ ಓಡಿಸುತ್ತೇವೆ ಎಂದಿದ್ದರು. ಸಾಲದ್ದಕ್ಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರ ವಿರುದ್ಧ ಸಚಿವ ಸಂಪುಟ ಸಭೆ ನಡೆಸಿ ನಿರ್ಣಯ ಕೈಗೊಳ್ಳಲಾಗಿತ್ತು. ಈಗ ಈ ಎಲ್ಲಾ ಭ್ರಷ್ಟರಿಗೆ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಸಿಕ್ಕಿದೆ ಎಂದು ಹೇಳಿದರು.
ಈಗಲಾದರೂ ಮುಡಾ ಪ್ರಕರಣದಲ್ಲಿ ತನಿಖೆಗೆ ಸಹಕರಿಸಲು ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಖ್ಯಮಂತ್ರಿ ಹುದ್ದೆಯ ಘನತೆಯನ್ನು ಉಳಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿನ ಎಲ್ಲಾ ಹಗರಣಗಳು ಬಯಲಿಗೆ ಬರಲಿದ್ದು ಕಾಂಗ್ರೆಸ್ ಸರ್ಕಾರ ಗಂಟು ಮೂಟೆ ಕಟ್ಟುವುದು ನಿಶ್ಚಿತವೆಂದು ಶಾಸಕರು ಹೇಳಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಮೇಯರ್ ಮನೋಜ್ ಕೋಡಿಕಲ್, ಉಪ ಮೇಯರ್ ಭಾನುಮತಿ ಪಿ.ಎಸ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಜಗದೀಶ್ ಶೇಣವ, ನಂದನ್ ಮಲ್ಯ, ರಮೇಶ್ ಹೆಗ್ಡೆ, ಮಂಜುಳಾ ರಾವ್, ಮಹೇಶ್ ಜೋಗಿ, ಪೂಜಾ ಪೈ, ಯತೀಶ್ ಆರ್ವಾರ್, ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.
Muda scam, BJP MLA Vedavyas kamath holds protest demanding resignation of CM Siddaramaiah. BJP members and leaders gathered for the resignation of CM for involving in muda case.
19-03-25 12:44 pm
Bangalore Correspondent
ಸೌಜನ್ಯಾ ಪ್ರಕರಣ ; ನ್ಯಾಯಕ್ಕಾಗಿ ಆಗ್ರಹಿಸಿ ಧರ್ಮಸ್ಥ...
19-03-25 11:39 am
ಮಾ.22ರಂದು ಕರ್ನಾಟಕ ಬಂದ್ ; ಯಾವುದೇ ಕಾರಣಕ್ಕೂ ಬಂದ್...
18-03-25 11:02 pm
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
19-03-25 02:10 pm
HK News Desk
ಮಹಾರಾಷ್ಟ್ರದಲ್ಲಿ 'ಛಾವಾ' ಚಿತ್ರ ಹೊತ್ತಿಸಿದ ಕಿಚ್ಚು...
17-03-25 10:57 pm
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am