ಬ್ರೇಕಿಂಗ್ ನ್ಯೂಸ್
24-09-24 10:16 pm Mangalore Correspondent ಕರಾವಳಿ
ಸುಳ್ಯ, ಸೆ.24: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕೇರಳದ ಕಾಸರಗೋಡು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವೈದ್ಯರು ಅಗೌರವ ತೋರಿದ್ದಾರೆಂದು ಸ್ವತಃ ನ್ಯಾಯಾಧೀಶರೇ ಸುಳ್ಯ ಪೊಲೀಸರಿಗೆ ದೂರು ನೀಡಿದ ಪ್ರಸಂಗ ನಡೆದಿದೆ.
ಕೇರಳದ ಕಾಸರಗೋಡಿನ ದೇಲಂಪಾಡಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಯುವತಿಯ ಹೇಳಿಕೆ ಪಡೆಯಲು ಆದೂರು ಪೊಲೀಸ್ ಅಧಿಕಾರಿಗಳ ಜೊತೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಆಗಮಿಸಿದ್ದಾಗ ಆಸ್ಪತ್ರೆಯ ಇಬ್ಬರು ವೈದ್ಯರು ಅಗೌರವದಿಂದ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಧೀಶರು ಸುಳ್ಯ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ.
ಕೇರಳ ಹೈಕೋರ್ಟ್ ಆದೇಶದ ಪ್ರಕಾರ ಆತ್ಮಹತ್ಯೆಗೆ ಯತ್ನಿಸಿದವರ ಹೇಳಿಕೆಯನ್ನು ಸ್ವತಃ ಜಿಲ್ಲಾ ನ್ಯಾಯಾಧೀಶರೇ ಸ್ಥಳಕ್ಕೆ ಹೋಗಿ ಪಡೆಯಬೇಕಿದ್ದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಅವರು ಸೆ.21ರಂದು ರಾತ್ರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು.
ತಾವು ಆಸ್ಪತ್ರೆಗೆ ಬರುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೂ, ವೈದ್ಯರು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಸುಳ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಯುವತಿಯ ಬಗ್ಗೆ ಮಾಹಿತಿ ಕೇಳಿದ್ದಕ್ಕೆ ಕರ್ತವ್ಯದಲ್ಲಿದ್ದ ವೈದ್ಯರು ಅದನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದಾರೆ ಎಂಬುದಾಗಿ ತನಗೆ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಬೇರೇನು ನಡೆದಿದೆ ಎಂಬ ಕುರಿತು ವರದಿ ನೀಡುವಂತೆ ತಾಲೂಕು ವೈದ್ಯಾಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Kasaragod Judge reports of disrespect shown by doctors during visit to Sullia hospital.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 06:13 pm
HK News Staffer
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm