ಬ್ರೇಕಿಂಗ್ ನ್ಯೂಸ್
24-09-24 10:16 pm Mangalore Correspondent ಕರಾವಳಿ
ಸುಳ್ಯ, ಸೆ.24: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕೇರಳದ ಕಾಸರಗೋಡು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವೈದ್ಯರು ಅಗೌರವ ತೋರಿದ್ದಾರೆಂದು ಸ್ವತಃ ನ್ಯಾಯಾಧೀಶರೇ ಸುಳ್ಯ ಪೊಲೀಸರಿಗೆ ದೂರು ನೀಡಿದ ಪ್ರಸಂಗ ನಡೆದಿದೆ.
ಕೇರಳದ ಕಾಸರಗೋಡಿನ ದೇಲಂಪಾಡಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಯುವತಿಯ ಹೇಳಿಕೆ ಪಡೆಯಲು ಆದೂರು ಪೊಲೀಸ್ ಅಧಿಕಾರಿಗಳ ಜೊತೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಆಗಮಿಸಿದ್ದಾಗ ಆಸ್ಪತ್ರೆಯ ಇಬ್ಬರು ವೈದ್ಯರು ಅಗೌರವದಿಂದ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಧೀಶರು ಸುಳ್ಯ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ.
ಕೇರಳ ಹೈಕೋರ್ಟ್ ಆದೇಶದ ಪ್ರಕಾರ ಆತ್ಮಹತ್ಯೆಗೆ ಯತ್ನಿಸಿದವರ ಹೇಳಿಕೆಯನ್ನು ಸ್ವತಃ ಜಿಲ್ಲಾ ನ್ಯಾಯಾಧೀಶರೇ ಸ್ಥಳಕ್ಕೆ ಹೋಗಿ ಪಡೆಯಬೇಕಿದ್ದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಅವರು ಸೆ.21ರಂದು ರಾತ್ರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು.
ತಾವು ಆಸ್ಪತ್ರೆಗೆ ಬರುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೂ, ವೈದ್ಯರು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಸುಳ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಯುವತಿಯ ಬಗ್ಗೆ ಮಾಹಿತಿ ಕೇಳಿದ್ದಕ್ಕೆ ಕರ್ತವ್ಯದಲ್ಲಿದ್ದ ವೈದ್ಯರು ಅದನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದಾರೆ ಎಂಬುದಾಗಿ ತನಗೆ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಬೇರೇನು ನಡೆದಿದೆ ಎಂಬ ಕುರಿತು ವರದಿ ನೀಡುವಂತೆ ತಾಲೂಕು ವೈದ್ಯಾಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Kasaragod Judge reports of disrespect shown by doctors during visit to Sullia hospital.
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am