ಬ್ರೇಕಿಂಗ್ ನ್ಯೂಸ್
24-09-24 10:16 pm Mangalore Correspondent ಕರಾವಳಿ
ಸುಳ್ಯ, ಸೆ.24: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯ ಹೇಳಿಕೆ ಪಡೆಯಲು ಸುಳ್ಯ ಆಸ್ಪತ್ರೆಗೆ ಬಂದಿದ್ದ ಕೇರಳದ ಕಾಸರಗೋಡು ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ವೈದ್ಯರು ಅಗೌರವ ತೋರಿದ್ದಾರೆಂದು ಸ್ವತಃ ನ್ಯಾಯಾಧೀಶರೇ ಸುಳ್ಯ ಪೊಲೀಸರಿಗೆ ದೂರು ನೀಡಿದ ಪ್ರಸಂಗ ನಡೆದಿದೆ.
ಕೇರಳದ ಕಾಸರಗೋಡಿನ ದೇಲಂಪಾಡಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಯುವತಿಯ ಹೇಳಿಕೆ ಪಡೆಯಲು ಆದೂರು ಪೊಲೀಸ್ ಅಧಿಕಾರಿಗಳ ಜೊತೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ನ್ಯಾಯಾಧೀಶರು ಆಗಮಿಸಿದ್ದಾಗ ಆಸ್ಪತ್ರೆಯ ಇಬ್ಬರು ವೈದ್ಯರು ಅಗೌರವದಿಂದ ನಡೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನ್ಯಾಯಾಧೀಶರು ಸುಳ್ಯ ಪೊಲೀಸ್ ಠಾಣೆಯಲ್ಲಿ ವೈದ್ಯರ ವಿರುದ್ಧ ದೂರು ನೀಡಿದ್ದಾರೆ.
ಕೇರಳ ಹೈಕೋರ್ಟ್ ಆದೇಶದ ಪ್ರಕಾರ ಆತ್ಮಹತ್ಯೆಗೆ ಯತ್ನಿಸಿದವರ ಹೇಳಿಕೆಯನ್ನು ಸ್ವತಃ ಜಿಲ್ಲಾ ನ್ಯಾಯಾಧೀಶರೇ ಸ್ಥಳಕ್ಕೆ ಹೋಗಿ ಪಡೆಯಬೇಕಿದ್ದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಅವರು ಸೆ.21ರಂದು ರಾತ್ರಿ ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ್ದರು.
ತಾವು ಆಸ್ಪತ್ರೆಗೆ ಬರುವ ಬಗ್ಗೆ ಮೊದಲೇ ಮಾಹಿತಿ ನೀಡಿದ್ದರೂ, ವೈದ್ಯರು ಅಗೌರವದಿಂದ ನಡೆಸಿಕೊಂಡಿದ್ದಾರೆ ಎಂದು ಮ್ಯಾಜಿಸ್ಟ್ರೇಟ್ ಅಬ್ದುಲ್ ಬಾತಿಷ್ ಸುಳ್ಯ ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ, ಯುವತಿಯ ಬಗ್ಗೆ ಮಾಹಿತಿ ಕೇಳಿದ್ದಕ್ಕೆ ಕರ್ತವ್ಯದಲ್ಲಿದ್ದ ವೈದ್ಯರು ಅದನ್ನು ಲಿಖಿತವಾಗಿ ನೀಡುವಂತೆ ಕೇಳಿದ್ದಾರೆ ಎಂಬುದಾಗಿ ತನಗೆ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಯಲ್ಲಿ ಬೇರೇನು ನಡೆದಿದೆ ಎಂಬ ಕುರಿತು ವರದಿ ನೀಡುವಂತೆ ತಾಲೂಕು ವೈದ್ಯಾಧಿಕಾರಿಗೆ ತಿಳಿಸಲಾಗಿದೆ ಎಂದು ಹೇಳಿದ್ದಾರೆ.
Kasaragod Judge reports of disrespect shown by doctors during visit to Sullia hospital.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 11:30 am
HK News Staffer
SDPI Protest, CM DK Shivakumar, Mangalore: ರಹ...
18-09-26 10:35 am
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am