ಬ್ರೇಕಿಂಗ್ ನ್ಯೂಸ್
24-09-24 10:31 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸಿನಿಮಾ, ನಾಟಕಗಳಲ್ಲಿ ಪರಿಶಿಷ್ಟ ಜನಾಂಗದ ನಲಿಕೆಯವರು ಅನಾದಿ ಕಾಲದಿಂದಲೂ ಆರಾಧಿಸಿಕೊಂಡು ಬಂದಿರುವ ದೈವಾರಾಧನೆಯನ್ನು ತೋರಿಸಿ ಅವಮಾನಿಸುತ್ತಿದ್ದಾರೆ. ಇದರಿಂದ ದೈವಗಳಿಗೆ ಮತ್ತು ದೈವ ಕಟ್ಟುವವರಿಗೆ ಅಪಚಾರ ಮಾಡುತ್ತಿದ್ದಾರೆಂದು ಆರೋಪಿಸಿ ದೈವ ನರ್ತಕರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ.
ತುಳು ಅಕಾಡೆಮಿ ಮಾಜಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್ ನೇತೃತ್ವದಲ್ಲಿ ಮಂಗಳೂರಿನ ಪಂಬದರ ಯಾನೆ ದೈವಾರಾಧಕರ ಸಮಾಜ ಸಂಘದಿಂದ ದೂರು ಸಲ್ಲಿಸಲಾಗಿದೆ. ದೈವಾರಾಧನೆ, ದೈವ ನರ್ತಕರಿಗೆ ಅವಮಾನ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ.
ಇತ್ತೀಚೆಗೆ ಕಲ್ಜಿಗ ಎನ್ನುವ ಕನ್ನಡ ಸಿನಿಮಾದಲ್ಲಿ ದೈವದ ಪಾತ್ರವನ್ನು ಅನ್ಯರು ಮಾಡಿ, ಆರಾಧನಾ ಪದ್ಧತಿಗೆ ಅಪಚಾರ ಎಸಗಿದ್ದಾರೆ. ಇದಲ್ಲದೆ, ಈ ಸಿನಿಮಾದ ಸುದ್ದಿಗೋಷ್ಟಿಯಲ್ಲಿ ದೈವಾರಾಧಕರನ್ನು ವ್ಯಕ್ತಿಯೊಬ್ಬರು ತುಚ್ಛವಾಗಿ ನಿಂದಿಸಿ ಮಾತನಾಡಿದ್ದಾರೆ. ಇದನ್ನು ನಾವು ಸಹಿಸುವುದಿಲ್ಲ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ದೂರು ನೀಡಿದ್ದೇವೆ. ನಾಟಕ, ಸಿನಿಮಾದಲ್ಲಿ ತೋರಿಸುವ ಮೂಲಕ ದೈವ ನರ್ತನ ಸೇವೆ ಮಾಡುವ ಸಮುದಾಯದವರ ವಿರುದ್ಧ ತಪ್ಪು ಸಂದೇಶ ನೀಡುತ್ತಿದ್ದಾರೆ. ಇದನ್ನು ಮುಂದುವರಿಸದಂತೆ ತಡೆ ಹೇರುವಂತೆ ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದೇವೆ ಎಂದು ದೈವಾರಾಧಕರು ಹೇಳಿದ್ದಾರೆ.
ದೈವಾರಾಧನೆ ಮತ್ತು ದೈವದ ಪಾತ್ರ ಮಾಡುವ ಹಿಂದುಳಿದ ವರ್ಗದ ಜನಾಂಗವನ್ನು ನಿಂದಿಸಿರುವವರ ವಿರುದ್ಧ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.
Disrespect to Daiva in movies and drama, case filed to police commissioner in Mangalore
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm