ಬ್ರೇಕಿಂಗ್ ನ್ಯೂಸ್
27-09-24 03:25 pm Mangalore Correspondent ಕರಾವಳಿ
ಮಂಗಳೂರು, ಸೆ.27: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಕರಣಿಕರು ಕೆಲಸದ ಒತ್ತಡ ಮತ್ತು ಮೊಬೈಲ್ ಏಪ್ ಗಳಿಂದಾಗುವ ಸಮಸ್ಯೆಯಿಂದ ಬೇಸತ್ತು ಮಂಗಳೂರಿನಲ್ಲಿ ಅನಿರ್ದಿಷ್ಟ ಧರಣಿ ಆರಂಭಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಗಳಿಂದ ಬಂದಿರುವ 150ಕ್ಕೂ ಹೆಚ್ಚು ಗ್ರಾಮ ಕರಣಿಕರು ಮಂಗಳೂರಿನ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಗ್ರಾಮ ಕರಣಿಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿಲ್ ಪೂಜಾರಿ, ನಮ್ಮ ಜಿಲ್ಲೆಯಲ್ಲಿ ಒಟ್ಟು 325 ಗ್ರಾಮ ಕರಣಿಕರ ಹುದ್ದೆಗಳಿದ್ದರೂ, 90 ಹುದ್ದೆಗಳು ಖಾಲಿಯಿದ್ದು ಅದರ ಹೊಣೆಭಾರವನ್ನು ಉಳಿದವರ ಮೇಲೆ ಹೊರಿಸಿದ್ದಾರೆ. ಇದಲ್ಲದೆ, 20ಕ್ಕೂ ಹೆಚ್ಚು ಮೊಬೈಲ್ ಏಪ್ ಗಳನ್ನು ಬಳಸಿ ತಂತ್ರಜ್ಞಾನ ಆಧರಿತವಾಗಿ ಕೆಲಸ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಶನಿವಾರ, ಭಾನುವಾರವೂ ರಜೆ ಇಲ್ಲದೆ ಕೆಲಸ ಮಾಡುವ ಸ್ಥಿತಿಯಾಗಿದೆ. 238 ಮಂದಿಯಲ್ಲಿ ನೂರಕ್ಕೂ ಹೆಚ್ಚು ಮಂದಿ ತಾಲೂಕು ಕಚೇರಿ, ಡೀಸಿ ಕಚೇರಿಯಲ್ಲಿದ್ದಾರೆ. ಈಗ 138 ಸಿಬಂದಿ 422 ಗ್ರಾಮಗಳ ಹೊಣೆ ಭಾರ ಹೊತ್ತು ಕೆಲಸ ಮಾಡಬೇಕಾಗಿದೆ. ಇದರ ಬಗ್ಗೆ ಸರಕಾರದ ಗಮನ ಸೆಳೆಯುವುದಕ್ಕಾಗಿ ಧರಣಿ ಕುಳಿತಿದ್ದೇವೆ ಎಂದರು.



ಧರಣಿಯಲ್ಲಿ 50ಕ್ಕೂ ಹೆಚ್ಚು ಮಹಿಳಾ ಸಿಬಂದಿಯೂ ಕೈಜೋಡಿಸಿದ್ದಾರೆ. 2019ರಿಂದ ಗ್ರಾಮ ಕರಣಿಕರ ಹುದ್ದೆಗೆ ನೇಮಕಾತಿ ಆಗಿಲ್ಲ. ಹೀಗಾಗಿ ನಮ್ಮ ಮೇಲೆ ವಿಪರೀತ ಹೊಣೆ ಭಾರ ಹೊರಿಸಿದ್ದಾರೆ. ಕಂದಾಯ ಇಲಾಖೆಯ ಪ್ರತಿ ಕೆಲಸಕ್ಕೂ ವಿಎಗಳನ್ನು ಹೊಣೆಯಾಗಿಸಿ ಒತ್ತಡ ಹೇರುತ್ತಿದ್ದಾರೆ. ನಾವು ವೈಯಕ್ತಿಕ ಜೀವನವೇ ಇಲ್ಲದೆ ಕೆಲಸ ಮಾಡುವ ಸ್ಥಿತಿಯಾಗಿದೆ ಎಂದು ಉಷಾ ಎಂಬವರು ಅಲವತ್ತುಕೊಂಡರು. ಧರಣಿಯಲ್ಲಿ ಗ್ರಾಮ ಕರಣಿಕರ ಸಂಘದ ಜಿಲ್ಲಾಧ್ಯಕ್ಷ ಸಂತೋಷ್, ಉಪಾಧ್ಯಕ್ಷ ಪ್ರದೀಪ್ ಕುಮಾರ್, ಅವಿನಾಶ್ ಬಿಲ್ಲವ, ಪುತ್ತೂರು ವಿಭಾಗ ಮಟ್ಟದ ಉಪಾಧ್ಯಕ್ಷೆ ಅಶ್ವಿನಿ, ಉಮೇಶ್ ಕಾವಡಿ, ಪ್ರಸನ್ನ ಪಕಳ, ತೌಫೀಕ್, ಶಿವರಾಜ್ ಗಾಯಕವಾಡ್, ಪ್ರದೀಪ್ ಶೆಣೈ ಮತ್ತಿತರರು ಇದ್ದರು.
Mobile app issues at office and work load, Mangalore village accountants hold protest in city.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm