ಬ್ರೇಕಿಂಗ್ ನ್ಯೂಸ್
28-09-24 02:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ.
ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ.









ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ ಎನ್ನಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಸುರತ್ಕಲ್ NITK ಇಂಜಿನಿಯರಿಂಗ್ ಕಾಲೇಜು ಸಮೀಪದಲ್ಲಿ ಉಡುಪಿ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯು ಕಾರು ಇದೇ ರೀತಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿತ್ತು.
Bmw car cathes fire near Adyar sahyadri college in Mangalore, video goes viral. Gurudeep who was taking the car to BMW service centre near Adyar suddenly saw the fire coming out of the engine. No casualties have been reported
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 06:13 pm
HK News Staffer
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm