ಬ್ರೇಕಿಂಗ್ ನ್ಯೂಸ್
01-10-24 03:26 pm Mangalore Correspondent ಕರಾವಳಿ
ಮಂಗಳೂರು, ಅ.1: ಹಿರಿಯ ನಾಗರಿಕರ ದಿನಾಚರಣೆಯ ದಿನದಂದೇ ನಿವೃತ್ತ ಸರಕಾರಿ ನೌಕರರನ್ನು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ನಾವೇನೂ ಸಾಲ ಕೇಳ್ತಾ ಇಲ್ಲ. ಸುದೀರ್ಘ ವರ್ಷ ಸರಕಾರಿ ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಬೇಕು. ಇನ್ನಾದರೂ ಹಿರಿಯರಾದ ನಮ್ಮನ್ನು ಬೀದಿಗೆ ಇಳಿಯುವಂತೆ ಮಾಡಬೇಡಿ ಎನ್ನುವುದು ನಮ್ಮ ಕಳಕಳಿ ಎಂದು ನಿವೃತ್ತ ಸರಕಾರಿ ನೌಕರರ ವೇದಿಕೆಯ ಜಿಲ್ಲಾ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದ್ದಾರೆ.
ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂಭಾಗದಲ್ಲಿ ವೇದಿಕೆಯ ವತಿಯಿಂದ ಏರ್ಪಡಿಸಲಾದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. 2022ರ ಜುಲೈ1ರಿಂದ 2024ರ ಜುಲೈ1ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು ಹಾಗೂ ಈ ಬಗ್ಗೆ ಪರಿಷ್ಕೃತ ಆದೇಶ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸಿದರು.


ರಾಜ್ಯವ್ಯಾಪಿ ಪ್ರತಿಭಟನೆ, ಸತ್ಯಾಗ್ರಹ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಅ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಮುಂದೆ ಬೆಳಗಾವಿಯಿಂದ ಬೆಂಗಳೂರು ವಿಧಾನಸೌಧ ತನಕ ಪಾದಯಾತ್ರೆ ನಡೆಸುತ್ತೇವೆ. ಸರಕಾರ ಕ್ರಮ ಜರುಗಿಸದೇ ಹೋದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಜಿಲ್ಲಾ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದ್ದಾರೆ.
ಕೋವಿಡ್ ಸಮಯದಲ್ಲಿ ತುರ್ತು ಸೇವೆಗಳನ್ನು ಮಾಡಿದವರು ಸರಕಾರಿ ನೌಕರರು. ಈಗಾಗಲೇ ನಮ್ಮ ಬೇಡಿಕೆಗಳ ಬಗ್ಗೆ ತಹಸೀಲ್ದಾರ್ ಮೂಲಕ ಆರ್ಥಿಕ ಇಲಾಖೆಯ ವರೆಗೂ ಗಮನ ಸೆಳೆದಿದ್ದೇವೆ. ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯವ್ಯಾಪಿ ಇಂದು ನಿವೃತ್ತ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವ ಸ್ಥಿತಿಯಾಗಿದೆ ಎಂದು ಸಿರಿಲ್ ರಾಬರ್ಟ್ ಡಿಸೋಜ ಹೇಳಿದರು.
ಜಿಲ್ಲಾ ಸಂಚಾಲಕ ಸ್ಟ್ಯಾನಿ ತಾವ್ರೋ ಮಾತನಾಡಿ, ನಿವೃತ್ತ ಸರಕಾರಿ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವಂತಾಗಿದ್ದು ವಿಷಾದನೀಯ. ಸರಕಾರ ಇದನ್ನು ಗಂಭೀರ ಪರಿಗಣಿಸಿ ನ್ಯಾಯ ಕೊಡಬೇಕು ಎಂದರು.
ನಿವೃತ್ತ ಹಿರಿಯ ಸರಕಾರಿ ನೌಕರ ವಿಠಲ ಶೆಟ್ಟಿಗಾರ್ ಮಾತನಾಡಿ, ನಾನು ನಿವೃತ್ತನಾಗಿ ಬಹಳ ವರ್ಷ ಆಗಿದೆ. ಆದರೆ ನಿವೃತ್ತ ಸರಕಾರಿ ನೌಕರರಿಗೆ ಅನ್ಯಾಯವಾಗುತ್ತಿರುವುದನ್ನು ನೋಡಿ ಸುಮ್ಮನಿರಲು ಸಾಧ್ಯವಾಗದೇ ಪ್ರತಿಭಟನೆಗೆ ಬಂದಿದ್ದೇನೆ ಎಂದರು.
ಸಂಚಾಲಕಿ ಮಂಜುಳಾ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪ್ರತಿಭಟನೆಯ ಬಳಿಕ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಿರಿಯ ಸರಕಾರಿ ನೌಕರರಾದ ವಿಜಯ ಪೈ, ಮೋಹನ ಬಂಗೇರ, ಎನ್. ಆನಂದ ನಾಯ್ಕ್, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ ಮೊದಲಾದವರು ಉಪಸ್ಥಿತರಿದ್ದರು.
Retired government employees protest in Mangalore, warning of hunger strike on Senior Citizens Day.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 10:35 am
HK News Staffer
Mangalore, Karnataka Cabinet Meeting, DK Shiv...
18-09-26 09:49 am
ಕಸ್ತೂರಿ ರಂಗನ್ ವರದಿ ; 43 ಗ್ರಾಮಗಳ ಆತಂಕ ನಿವಾರಣೆಗ...
17-09-26 08:48 pm
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am