ಬ್ರೇಕಿಂಗ್ ನ್ಯೂಸ್
03-10-24 10:17 pm Mangalore Correspondent ಕರಾವಳಿ
ಮಂಗಳೂರು, ಅ.3: ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ಬ್ಯಾಂಕೇತರ ಹಣಕಾಸು ಸಂಸ್ಥೆಯಾಗಿದ್ದು, ಆರಂಭಗೊಂಡ ಎರಡೇ ವರ್ಷದಲ್ಲಿ ಅಗಾಧ ಮಟ್ಟಿಗೆ ಬೆಳೆದು ನಿಂತಿದೆ. ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಡುಬಿದ್ರೆ ಸೇರಿದಂತೆ ಎಂಟು ಕಡೆ ಕಚೇರಿಗಳನ್ನು ಹೊಂದಿದ್ದು, ಇದೀಗ ಒಂದೇ ದಿನ ಮತ್ತೆರಡು ಕಚೇರಿಗಳನ್ನು ಆರಂಭಿಸುತ್ತಿದೆ.
ಸುರತ್ಕಲ್ ಮತ್ತು ಬಂಟ್ವಾಳ ತಾಲೂಕಿನ ಮೆಲ್ಕಾರಿನಲ್ಲಿ ಅ.5ರಂದು ಒಂದೇ ದಿನ ಬೆಳಗ್ಗೆ ಮತ್ತು ಸಂಜೆ ಎರಡು ಕಚೇರಿಗಳ ಉದ್ಘಾಟನೆ ನಡೆಯಲಿದೆ. ಸುರತ್ಕಲ್ ನಲ್ಲಿ ಮಾರ್ಕೆಟ್ ರಸ್ತೆಯಲ್ಲಿರುವ ಆರೋಗ್ಯ ಕೇಂದ್ರದ ಬಳಿಯ ಕಟ್ಟಡದಲ್ಲಿ ಮತ್ತು ಮೆಲ್ಕಾರಿನ ಪ್ರತಿಷ್ಠಿತ ಬಿರ್ವ ಸೆಂಟರ್ ಕಟ್ಟಡದಲ್ಲಿ ನಿಧಿ ಸಂಸ್ಥೆಯ ಕಚೇರಿ ಆರಂಭಗೊಳ್ಳಲಿದೆ. ಎರಡೂ ಕೇಂದ್ರದಲ್ಲಿ ಪ್ರತ್ಯೇಕವಾಗಿ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಬೆಳಗ್ಗೆ 10.30ಕ್ಕೆ ಸುರತ್ಕಲ್ ಶಾಖೆ ಮತ್ತು ಸಂಜೆ 5.30ಕ್ಕೆ ಮೆಲ್ಕಾರ್ ಶಾಖೆ ಉದ್ಘಾಟನೆಯಾಗಲಿದೆ.
ಎರಡೂ ಶಾಖೆಗಳನ್ನು ದಕ್ಷಿಣ ಕನ್ನಡ ಮ್ಯೂಚ್ವಲ್ ಬೆನಿಫಿಟ್ ನಿಧಿ ಲಿಮಿಟೆಡ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆಲ್ವಿನ್ ಜೋಯಲ್ ನೊರೊನ್ಹಾ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಮೂರ್ತೆದಾರರ ಮಹಾಮಂಡಲ ಅಧ್ಯಕ್ಷ ಕುಚ್ಚಿಗುಡ್ಡೆ ಸಂಜೀವ ಪೂಜಾರಿ, ಸದಾಶಿವ ಪೂಜಾರಿ ಬೊಂಡಾಲ, ನೇಹ ಇಲೆಕ್ಟ್ರಿಕಲ್ಸ್ ಮಾಲಕ ಸತೀಶ್, ಸಿಟಿ ಪರ್ಲ್ ಕಾಂಪ್ಲೆಕ್ಸ್ ಮಾಲಕ ಐಬರ್ಟ್ ಜೆರಾಲ್ಡ್ ಡಿಸೋಜ, ಉದ್ಯಮಿ ರಮಾನಾಥ ಶೆಟ್ಟಿ, ಕೇಶವ ಪೂಜಾರಿ, ನಿಧಿ ಲಿಮಿಟೆಡ್ ಸಂಸ್ಥೆಯ ಕಡಬ ಶಾಖೆಯ ಅಧ್ಯಕ್ಷ ಎಸ್. ಸತೀಶ್ ನಾಯಕ್, ಸುಳ್ಯ ಶಾಖೆಯ ಅಧ್ಯಕ್ಷ ವೆಂಕಟರಮಣ, ಮಂಗಳೂರಿನ ಪಿವಿಎಸ್ ಶಾಖೆ ಜನರಲ್ ಮ್ಯಾನೇಜರ್ ಹರ್ಷಿತ್ ಸಾಲ್ಯಾನ್, ಕಾರ್ಕಳ ಶಾಖಾಧ್ಯಕ್ಷ ಕಿರಣ್ ಬಂಗೇರ ಉಪಸ್ಥಿತಿ ಇರಲಿದ್ದಾರೆ.
ದಕ್ಷಿಣ ಕನ್ನಡ ಮ್ಯೂಚುಯಲ್ ಬೆನಿಫಿಟ್ ನಿಧಿ ಲಿಮಿಟೆಡ್ ಬ್ಯಾಂಕ್ ಮಾದರಿಯಲ್ಲೇ ಹಣಕಾಸು ನಿರ್ವಹಣೆ ಮಾಡುತ್ತಿರುವ ಸಂಸ್ಥೆಯಾಗಿದ್ದು, ಆರಂಭಗೊಂಡ ನಾಲ್ಕೇ ವರ್ಷದಲ್ಲಿ ಹತ್ತು ಶಾಖೆಗಳನ್ನು ಸ್ಥಾಪಿಸಿದ ಹೆಗ್ಗಳಿಕೆ ಮಾಡಿದೆ. ಮೂಡುಬಿದ್ರೆಯಲ್ಲಿ ಪ್ರಧಾನ ಕಚೇರಿ ಹೊಂದಿದ್ದು, ಮಂಗಳೂರಿನ ಪಿವಿಎಸ್ ವೃತ್ತದಲ್ಲಿ ಎರಡನೇ ಶಾಖೆ, ಆನಂತರ ಹಂಪನಕಟ್ಟೆ, ಅಸೈಗೋಳಿ, ಕಡಬ, ಕಾರ್ಕಳ, ಗುತ್ತಿಗಾರು, ಪುತ್ತೂರಿನಲ್ಲಿ ಶಾಖೆಗಳನ್ನು ಆರಂಭಿಸಿದೆ. ಇದೀಗ ಮತ್ತೆರಡು ಕಚೇರಿಗಳನ್ನು ಸುರತ್ಕಲ್ ಮತ್ತು ಮೆಲ್ಕಾರಿನಲ್ಲಿ ಆರಂಭಿಸುತ್ತಿದ್ದು, ಜಿಲ್ಲೆಯಾದ್ಯಂತ ಜನಸಾಮಾನ್ಯರ ಬಳಿಗೆ ತಲುಪುತ್ತಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
Mangalore Dakshina Kannada Mutual benefit Nidhi Company to inaugurate 10th branch at surathkal and Melkar in just span of 4 years. DKMBNL is a one of India's leading Mutual Nidhi Company. DKMBNL describes itself as a one-stop financial service provider.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm