ಬ್ರೇಕಿಂಗ್ ನ್ಯೂಸ್
04-10-24 07:44 pm Mangalore Correspondent ಕರಾವಳಿ
ಮಂಗಳೂರು, ಅ.4: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವ ಅಂಗವಾಗಿ ಕ್ಷೇತ್ರದ ವತಿಯಿಂದ ಜಿಯೂಸ್ ಫಿಟ್ನೆಸ್ ಕೇಂದ್ರ, ಖೇಲೋ ಇಂಡಿಯಾ ಹಾಗೂ ಡೆಕತ್ಲಾನ್ ಸಹಭಾಗಿತ್ವದಲ್ಲಿ ಅ.6ರಂದು ದಸರಾ ಹಾಫ್ ಮ್ಯಾರಥಾನ್ ನಡೆಯಲಿದೆ ಎಂದು ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ತಿಳಿಸಿದ್ದಾರೆ.
ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, `ವನ್ ಸಿಟಿ ವನ್ ಸ್ಪಿರಿಟ್' ಧ್ಯೇಯದೊಂದಿಗೆ `ಎಲ್ಲಿ ಒಗ್ಗಟ್ಟಿದೆಯೋ ಅಲ್ಲಿ ಬಲವಿದೆ' ಎಂಬ ವಾಕ್ಯದೊಂದಿಗೆ ಈ ಸ್ಪರ್ಧೆ ನಡೆಯಲಿದೆ. 21 ಕಿ.ಮೀ., 10 ಕಿ.ಮೀ. ಹಾಗೂ 5 ಕಿ.ಮೀ.ಗಳ ಮೂರು ವಿಭಾಗಗಳಲ್ಲಿ ಹ್ಯಾಫ್ ಮಾರಥಾನ್ ಆಯೋಜಿಸಲಾಗಿದೆ ಎಂದರು.
ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಡೆಯಲಿರುವ ಹಾಫ್ ಮ್ಯಾರಥಾನ್ನಲ್ಲಿ ಪ್ರಥಮ ವಿಜೇತರಿಗೆ 25 ಸಾವಿರ ರೂ. ನಗದು ಬಹುಮಾನ, ದ್ವಿತೀಯ ಬಹುಮಾನ 15 ಸಾವಿರ ರೂ. ಆಗಿರುತ್ತದೆ. 21 ಕಿ.ಮೀ. ಮ್ಯಾರಥಾನ್ ಬೆಳಗ್ಗೆ 5 ಗಂಟೆಗೆ, 10 ಕಿ.ಮೀ. ಮ್ಯಾರಥಾನ್ 5.30ಕ್ಕೆ ಹಾಗೂ 5 ಕಿ.ಮೀ. ನಡಿಗೆ 6.30ಕ್ಕೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಳ್ಳಲಿದೆ. ಹಾಫ್ ಮ್ಯಾರಥಾನ್ ಕ್ಷೇತ್ರದಿಂದ ಹೊರಟು ನಾರಾಯಣ ಗುರು ಸರ್ಕಲ್ ಆಗಿ, ಚಿಲಿಂಬಿ, ಪೈ ಸೇಲ್ಸ್ ದೇರೆಬೈಲ್, ಕರ್ನಾಟಕ ಬ್ಯಾಂಕ್, ಭಾರತ್ ಮಾಲ್, ಬಿಜೈನಿಂದ ಕದ್ರಿ ದೇವಸ್ಥಾನ ರಸ್ತೆ ಮಾರ್ಗವಾಗಿ, ಮಲ್ಲಿಕಟ್ಟೆ ಭಾರತ್ ಬೀಡಿ, ಕಂಕನಾಡಿ, ವೆಲೆನ್ಸಿಯಾ, ಮಂಗಳಾದೇವಿ, ಫಾರಂ ಮಾಲ್, ಕ್ಲಾಕ್ ಟವರ್ ಆಗಿ ವೆಂಕಟ್ರಮಣ ದೇವಸ್ಥಾನದ ಬಳಿಯಿಂದ ಕ್ಷೇತ್ರಕ್ಕೆ ಹಿಂತಿರುಗಲಿದೆ.
ಮ್ಯಾರಥಾನ್ನಲ್ಲಿ ಭಾಗವಹಿಸುವವರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಸ್ವಯಂಸೇವಕರ ಜತೆಗೆ, ಫಿಸಿಯೋತೆರಪಿಸ್ಟ್ ಗಳು, ಆ್ಯಂಬುಲೆನ್ಸ್ ಗಳನ್ನು ನಿಗದಿತ ಸ್ಥಳಗಳಲ್ಲಿ ನಿಯೋಜಿಸಲಾಗಿರುತ್ತದೆ. ಮ್ಯಾರಥಾನ್ನಲ್ಲಿ ಭಾಗವಹಿಸುವವರಿಗೆ ಲೊಕೇಷನ್ ದೃಷ್ಟಿಯಿಂದ ಮೈಕ್ರೋ ಚಿಪ್ಗಳನ್ನು ನೀಡಲಾಗುತ್ತದೆ. ಭಾಗವಹಿಸುವ ಎಲ್ಲರಿಗೂ ಪದಕ ಹಾಗೂ ಪ್ರಮಾಣ ಪತ್ರ, ಟೀ ಶರ್ಟ್ ಗಳನ್ನು ಒದಗಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಈಗಾಗಲೇ 1200ರಷ್ಟು ಮಂದಿ ನೋಂದಣಿ ಮಾಡಿಕೊಂಡಿದ್ದು, ಸ್ಥಳದಲ್ಲೇ ನೋಂದಣಿಗೂ ಅವಕಾಶವಿರಲಿದೆ. ಸುಮಾರು 2000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಸಹಿತ ಹಲವು ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ರಕ್ಷಿತ್, ಜಯರಾಂ, ಶಾಮಸುಂದರ್, ರಾಜೇಶ್, ರವಿ, ಧನರಾಜ್, ಸುಖ್ ಪಾಲ್ ಪೊಳಲಿ, ರಕ್ಷಿತ್ ಉಪಸ್ಥಿತರಿದ್ದರು.
Mangalore Dasara 2024, 21 kms Half Marathon on October 6th to be held said Padmaraj R, Treasurer of the Temple Committee
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm