ಬ್ರೇಕಿಂಗ್ ನ್ಯೂಸ್
04-10-24 09:40 pm Udupi Correspondent ಕರಾವಳಿ
ಉಡುಪಿ, ಅ.4: ಬೈಂದೂರು ತಾಲೂಕಿನ ಉಪ್ಪುಂದದಲ್ಲಿ ಕಲುಷಿತ ನೀರಿನಿಂದಾಗಿ ವಾಂತಿಭೇದಿ ಕಾಣಿಸಿಕೊಂಡ ಪ್ರಕರಣದ ಬಗ್ಗೆ ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಸಾವಿರಾರು ಜನರಿಗೆ ವಾಂತಿಭೇದಿ ಆಗಿಲ್ಲ. ಪ್ರತಿ ಮನೆಗೆ ಭೇಟಿ ನೀಡಿದ್ದೇವೆ. ಪ್ರತಿ ದಿನ 25-30 ಕೇಸು ಪತ್ತೆಯಾಗಿದೆ. ಒಟ್ಟು 143 ಪ್ರಕರಣ ಪತ್ತೆಯಾಗಿದೆ. ಕಾಲರಾ ಅಲ್ಲ, ಆಮಶಂಕೆ ಇರುವಂತೆ ತೋರುತ್ತಿದೆ ಎಂದು ಆರೋಗ್ಯ ಇಲಾಖೆ ಜಿಲ್ಲಾ ಸರ್ವೇಕ್ಷಣ ಅಧಿಕಾರಿ ನಾಗರತ್ನ ಹೇಳಿದ್ದಾರೆ,
ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲವೆಡೆ ಏಕಕಾಲದಲ್ಲಿ ವಾಂತಿಭೇದಿ ಮಾದರಿಯಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಿದ್ದರಿಂದ ಕಲುಷಿತ ನೀರು ಕಾರಣ ಎಂದು ಸುದ್ದಿಯಾಗಿತ್ತು. ಕಾಲರಾ ರೋಗ ಕಾಣಿಸಿಕೊಂಡಿರಬಹುದು ಎಂದು ಆರೋಗ್ಯ ಇಲಾಖೆಯವರು ತಪಾಸಣೆಗೆ ಮುಂದಾಗಿದ್ದರು. ವಾಂತಿ- ಭೇದಿ ಬಗ್ಗೆ ಪ್ರಯೋಗಾಲಯ ವರದಿ ಪಡೆಯಲಾಗಿದ್ದು, ಕಾಲರಾ ಇಲ್ಲ. ಅಲ್ಲಿ ಪತ್ತೆಯಾಗಿರುವುದು ಆಮಶಂಕೆ ಪ್ರಕರಣ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೆ, ಸಾವಿರಾರು ಜನರಿಗೆ ವಾಂತಿ ಭೇದಿ ಆಗಿಲ್ಲ. ಪ್ರತೀ ಮನೆಗೆ ಭೇಟಿ ಬಳಿಕ 143 ಪ್ರಕರಣ ಕಂಡುಬಂದಿದೆ. ಪ್ರತಿ ದಿನ 25ರಿಂದ 30 ಕೇಸು ಪತ್ತೆಯಾಗಿತ್ತು. ಸೆಪ್ಟೆಂಬರ್ 27ರಿಂದ ಹಲವರಲ್ಲಿ ವಾಂತಿಭೇದಿ ಕಂಡುಬಂದಿತ್ತು. ಜಿಲ್ಲೆಯಲ್ಲಿ ಕಾಲರಾ ಭೀತಿ ಇದ್ದುದರಿಂದ ನಾವು ತಕ್ಷಣ ಅಲರ್ಟ್ ಆಗಿದ್ದೆವು. ಕಾಲರ ಇರಬಹುದೆಂದು ಭಾವಿಸಿ, ಸರ್ವೇಕ್ಷಣೆ ಮಾಡಲಾಗಿತ್ತು. ಅದೃಷ್ಟವಶಾತ್ ಯಾರಲ್ಲೂ ಕಾಲರಾ ಪತ್ತೆಯಾಗಿಲ್ಲ.
ಸಾಮಾನ್ಯ ಕಲುಶಿತ ನೀರಿನಿಂದಾಗಿ ವಾಂತಿ ಭೇದಿ ಉಂಟಾಗಿತ್ತು. ಮಲ ಪರೀಕ್ಷೆ ನಡೆಸಿದಾಗ ಇಬ್ಬರಲ್ಲಿ ಆಮಶಂಕೆ ಪತ್ತೆಯಾಗಿದೆ. ಎಲ್ಲಾ ರೋಗಿಗಳು ಗುಣಮುಖರಾಗಿದ್ದಾರೆ. ಸಂತ್ರಸ್ತ ಪ್ರದೇಶದ ನೀರಿನ ಪರೀಕ್ಷೆ ನಡೆಸಿದ್ದೇವೆ. ಕುಡಿಯುವ ನೀರನ್ನು ಕ್ಲೋರಿನೇಷನ್ ಮಾಡಿದ್ದೇವೆ. ಎಲ್ಲಾ ಓವರ್ ಹೆಡ್ ಟ್ಯಾಂಕುಗಳನ್ನು ಸ್ವಚ್ಛಗೊಳಿಸಿದ್ದೇವೆ. ವಿಪರೀತ ಮಳೆ, ನೆರೆಯಿಂದ ನೀರು ಕಲುಷಿತ ಆಗಿರಬಹುದು. ನೀರಿನಲ್ಲಿ ಕ್ಲೋರಿನ್ ಪ್ರಮಾಣ ಹೆಚ್ಚಾಗಿದೆ ಅನ್ನೋದು ಸುಳ್ಳು. ವೈಜ್ಞಾನಿಕವಾಗಿ ಕ್ಲೋರಿನೇಶನ್ ಮಾಡಿದ್ದೇವೆ. ಕುಡಿಯಲು ನೀರು ಯೋಗ್ಯ ಎಂದು ವರದಿ ಬಂದ ಮೇಲೆ ಸರಬರಾಜು ಮಾಡಿದ್ದೇವೆ. ಅಗತ್ಯ ಬಿದ್ದರೆ ಸೂಪರ್ ಕ್ಲೋರಿನೇಷನ್ ಮಾಡುತ್ತೇವೆ ಎಂದಿದ್ದಾರೆ.
ಕ್ಲೋರಿನ್ ನಿಂದ ಈ ರೀತಿಯ ಕಾಯಿಲೆ ಬರುತ್ತೆ ಅನ್ನೋದು ತಪ್ಪು ತಿಳುವಳಿಕೆ. ಒಳರೋಗಿಗಳಾಗಿ ದಾಖಲಾದವರ ಸಂಖ್ಯೆ ನಿಯಂತ್ರಣದಲ್ಲಿದೆ. ಕಾಲರಾ ಇರಬಹುದು ಎಂಬ ಕಾರಣಕ್ಕೆ ಆತಂಕವಾಗಿತ್ತು. ಬೇರೆ ಬೇರೆ ಮೂಲಗಳಿಂದ ಕಾಲಾರಾ ಬಂದರೆ ನಿಯಂತ್ರಣ ಕಷ್ಟವಾಗುತ್ತದೆ. ಇದು ಕಾಲರಾ ಅಲ್ಲ, ಹಾಗಾಗಿ ಸಮಸ್ಯೆ ಇಲ್ಲ ಎಂದು ನಾಗರತ್ನ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
More than one thousand residents at Uppunda in Udupi district fell ill after drinking contaminated water from a local overhead water tank, Health Department officials said on Friday.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
17-03-25 11:02 pm
Udupi Correspondent
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
Mangalore Accident, Harekala, Death: ಹರೇಕಳದಲ್...
17-03-25 11:29 am
UT Khader, Mangalore, Tulu Academy: ತುಳು ಕಲಿತ...
16-03-25 10:55 pm
17-03-25 07:51 pm
Mangalore Correspondent
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm