ಬ್ರೇಕಿಂಗ್ ನ್ಯೂಸ್
05-10-24 11:37 am Mangalore Correspondent ಕರಾವಳಿ
ಉಳ್ಳಾಲ, ಅ.5: ಮನೆಯಿಂದ ನಾಪತ್ತೆಯಾಗಿದ್ದ ಅವಿವಾಹಿತ ವ್ಯಕ್ತಿಯೋರ್ವರು ಪಕ್ಕದ ಪಾಳು ಬಿದ್ದ ಬಾವಿಯಲ್ಲಿ ಶವವಾಗಿ ಪತ್ತೆಯಾದ ಘಟನೆ ಕೊಲ್ಯ ಕುಜುಮಗದ್ದೆಯಲ್ಲಿ ನಡೆದಿದೆ.
ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕೊಲ್ಯ ಕುಜುಮಗದ್ದೆ ನಿವಾಸಿ ಪ್ರಸಾದ್ (44) ಮೃತ ದುರ್ದೈವಿ. ಮೂಲತ: ಜಪ್ಪು, ಗೋರ್ದಡ್ಡು ನಿವಾಸಿಯಾದ ಪ್ರಸಾದ್ ಕಳೆದ ಕೆಲವು ವರುಷಗಳಿಂದ ಕುಟುಂಬ ಸಮೇತ ಕುಜುಮಗದ್ದೆಯಲ್ಲಿ ನೆಲೆಸಿದ್ದರು. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಅವರು ಅವಿವಾಹಿತರಾಗಿದ್ದು ಕೆಲ ದಿನಗಳಿಂದ ಖಿನ್ನತೆಗೊಳಗಾಗಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋದ ಪ್ರಸಾದ್ ಅವರು ಮತ್ತೆ ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದರು. ಪ್ರಸಾದ್ ನಾಪತ್ತೆಯಾದ ಬಗ್ಗೆ ಅವರ ಸಹೋದರ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಿನ್ನೆ ರಾತ್ರಿ ದೂರು ದಾಖಲಿಸಿದ್ದರು. ಮನೆಮಂದಿ ನೆರೆಹೊರೆಯವರು ಹುಡುಕಾಡಿದ್ದು ಇಂದು ಬೆಳಗ್ಗೆ ಮನೆ ಹತ್ತಿರದ ಪಾಳು ಬಿದ್ದ ಬಾವಿಯ ಬಳಿ ಪ್ರಸಾದ್ ಅವರ ಪಾದರಕ್ಷೆ ದೊರೆತಿದ್ದು ಪ್ರಸಾದ್ ಬಾವಿಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಮೃತದೇಹವನ್ನ ಮೇಲಕ್ಕೆತ್ತಿದ್ದಾರೆ. ಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಶಂಕಿಸಲಾಗಿದ್ದು ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಮನೆಗೆ ಹಿರಿ ಮಗನಾದ ಮೃತ ಪ್ರಸಾದ್ ತಾಯಿ, ತಂದೆ, ಇಬ್ಬರು ಸಹೋದರರು,ಓರ್ವ ಸಹೋದರಿಯನ್ನ ಅಗಲಿದ್ದಾರೆ.
Missing person body found inside well at kolya near someshwara in Mangalore. The deceased has been identified as Prasad (44). Ullal police are now investigating the case.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm