ಬ್ರೇಕಿಂಗ್ ನ್ಯೂಸ್
11-12-20 10:26 am Mangalore Correspondent ಕರಾವಳಿ
ಮಂಗಳೂರು, ಡಿ.11: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಶ್ರೀರಕ್ಷಾ ದೋಣಿ ದುರಂತಕ್ಕೆ ಸಂಬಂಧಿಸಿ ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ವೇದವ್ಯಾಸ ಕಾಮತ್ ಸದನದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ 25 ಜನರಿದ್ದ ಶ್ರೀರಕ್ಷಾ ಹೆಸರಿನ ದೋಣಿ ಮುಳುಗಡೆಯಾಗಿ 19 ಜನರು ಪ್ರಾಣಾಪಾಯದಿಂದ ಪಾರಾಗಿ 6 ಜನರು ಮೃತಪಟ್ಟಿದ್ದರು. ಈ ಘಟನೆಯ ಕುರಿತು ಸದನದಲ್ಲಿ ಮಾತನಾಡಿದ ಶಾಸಕ ಕಾಮತ್ 6 ಜನರಲ್ಲಿ ಒಬ್ಬರ ಮೃತದೇಹ ಇನ್ನೂ ಪತ್ತೆಯಾಗಿಲ್ಲ, ಮೃತದೇಹದ ಶೋಧ ಕಾರ್ಯ ನಡೆಯುತ್ತಿದೆ ಎಂದರು.

ಈಗಾಗಲೇ ಮೀನುಗಾರಿಕಾ ಇಲಾಖೆಯು ಮೃತರ ಕುಟುಂಬಗಳಿಗೆ ತಲಾ 6 ಲಕ್ಷ ರೂಪಾಯಿ ಪರಿಹಾರ ಧನವನ್ನು ಸಂಸದ ನಳಿನ್ ಕುಮಾರ್ ಕಟೀಲ್, ಮೀನುಗಾರಿಕಾ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನೀಡಲಾಗಿದೆ. ಬೇರೆಡೆಗಳಲ್ಲಿ ಸಂಭವಿಸಿದ ದೋಣಿ ದುರಂತ ಘಟನೆಗಳಲ್ಲಿ 10 ಲಕ್ಷದ ವರೆಗೆ ಪರಿಹಾರ ನೀಡಲಾಗಿದೆ. ಹಾಗಾಗಿ ಸರ್ಕಾರವು ಮುತುವರ್ಜಿ ವಹಿಸಿ ಹೆಚ್ಚಿನ ಪರಿಹಾರ ಧನ ಬಿಡುಗಡೆಗೊಳಿಸುವಂತೆ ಶಾಸಕ ಕಾಮತ್ ಮನವಿ ಮಾಡಿಕೊಂಡರು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್. ಅಶೋಕ್, ಮೀನುಗಾರಿಕಾ ಸಚಿವರು ಹಾಗೂ ಸರ್ಕಾರದ ಜೊತೆ ಈ ಕುರಿತು ಚರ್ಚಿಸಲಾಗುವುದು ಎಂದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am