ಬ್ರೇಕಿಂಗ್ ನ್ಯೂಸ್
07-10-24 11:07 pm Mangalore Correspondent ಕರಾವಳಿ
ಮಂಗಳೂರು, ಅ.7: ಅಖಿಲ ಭಾರತ ಕೊಂಕಣಿ ಪರಿಷದ್ನ 33ನೇ ಅಧಿವೇಶನ ಗೋವಾದ ಮಡ್ಗಾಂವ್, ರವೀಂದ್ರ ಭವನದಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆಯಲಿದೆ. ಕಾರ್ಯಕ್ರಮವನ್ನು ಹಿರಿಯ ಬರಹಗಾರ ಮತ್ತು ಭಾಷಾ ವಿದ್ವಾಂಸ ಡಾ. ಗಣೇಶ ದೇವಿ ಉದ್ಘಾಟಿಸಲಿದ್ದಾರೆ.
ಪರಿಷದ್ನಲ್ಲಿ ಕೊಂಕಣಿ ಶಿಕ್ಷಣ, ಭಾಷೆಯ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಬಳಕೆ ಇತ್ಯಾದಿಗಳನ್ನು ಒಳಗೊಂಡ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಪರಿಷದ್ ಗೆ ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಗೋವಾದಿಂದ ಪ್ರತಿನಿಧಿಗಳು ಹಾಜರಾಗಲಿದ್ದಾರೆ. ರೆ। ಮೌಝಿನೋ ಅರ್ತಾಡೆ ಅವರು ಪರಿಷದ್ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದು, ಎರಡು ವರ್ಷಗಳ ಕಾಲ ಈ ಹುದ್ದೆಯನ್ನು ಹೊಂದಿರುತ್ತಾರೆ. ಕೊಂಕಣಿ ಭಾಷಾ ಮಂಡಳದ ಮಾಜಿ ಅಧ್ಯಕ್ಷ ಪ್ರಶಾಂತ್ ನಾಯಕ್ ಅವರು ಸ್ವಾಗತ ಸಮಿತಿಯ ಅಧ್ಯಕ್ಷರಾಗಿದ್ದಾರೆ ಮತ್ತು ಅನಂತ ಅಗ್ನಿ, ಮಂಗಲ್ದಾಸ್ ಭಟ್ ಸಂಘಟನಾ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಕಾರ್ಯದರ್ಶಿಯಾಗಿದ್ದಾರೆ.
ಪರಿಷದಿನ ಕಾರ್ಯಾಧ್ಯಕ್ಷ ಚೇತನ್ ಅಚಾರ್ಯ, ಪ್ರಶಾಂತ್ ನಾಯಕ್ ಮತ್ತು ಸುದೀನ್ ಲೊಲಿಯೇಕರ್ ಅವರನ್ನು ಒಳಗೊಂಡ ಪ್ರತಿನಿಧಿಗಳು ಪರಿಷದಿಗೆ ಪ್ರತಿನಿಧಿಗಳನ್ನು ಆರಿಸುವ ಸಲುವಾಗಿ ಕರ್ನಾಟಕ ಮತ್ತು ಕೇರಳ ರಾಜ್ಯಗಳಿಗೆ ಪ್ರವಾಸ ಕೈಗೊಂಡಿದ್ದಾರೆ.
1939ರಲ್ಲಿ ಸ್ವರ್ಗೀಯ ಮಾಧವ ಮಂಜುನಾಥ ಶಾನುಭಾಗ್ ಅವರು ಸ್ಥಾಪಿಸಿದ ಪರಿಷದ್ ಕೊಂಕಣಿ ಭಾಷೆ ಮತ್ತು ಅದರ ಜನರ ಅಭಿವೃದ್ಧಿಯತ್ತ ಕಾರ್ಯ ನಿರ್ವಹಿಸುತ್ತಿದೆ. ಆಯೋಜಕರು ಕರ್ನಾಟಕದ ಕೊಂಕಣಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಪರಿಷದಿಗೆ ಹಾಜರಾಗುವಂತೆ ಮನವಿ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಪರಿಷದಿನ ಕಾರ್ಯಾಧ್ಯಕ್ಷ ಚೇತನ್ ಅಚಾರ್ಯ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷ ಪ್ರಶಾಂತ್ ನಾಯಕ್ ಈ ಮಾಹಿತಿ ನೀಡಿದರು.
ಅಖಿಲ ಭಾರತ ಕೊಂಕಣಿ ಪರಿಷದ್ ಕಾರ್ಯಾಧ್ಯಕ್ಷ ಡಾ| ಕಸ್ತೂರಿ ಮೋಹನ್ ಪೈ, ಎಚ್. ಎಮ್. ಪರ್ನಾಲ್, ಟೈಟಸ್ ನೊರೊನ್ಹಾ , ಮೆಲ್ವಿನ್ ರೊಡ್ರಿಗಸ್ ಸುದ್ದಿಗೋಷ್ಟಿಯಲ್ಲಿ ಇದ್ದರು.
The 33rd session of the All India Konkani Parishad will take place on October 26 and 27, at Ravindra Bhavan, Margao, Goa.The two-day event will be inaugurated on the morning of October 26 by Dr Ganesh Devi, a renowned writer and language scholar. The parishad will discuss various issues related to the Konkani language, including its role in education and the use of technology for language development.
17-03-25 11:54 am
Bangalore Correspondent
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm