ಬ್ರೇಕಿಂಗ್ ನ್ಯೂಸ್
08-10-24 01:18 pm Mangalore Correspondent ಕರಾವಳಿ
ಮಂಗಳೂರು, ಅ.8: ಕೆಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸದಿದ್ದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ, ಎಸ್ಪಿ, ಡಿಸಿ ಕಚೇರಿ ಎದುರು ಧರಣಿ ನಡೆಸುದಾಗಿ ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಸಮಿತಿ ಉಪಾಧ್ಯಕ್ಷ ಸ್ಟೀವನ್ ರೊಡ್ರಿಗಸ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಸಮಿತಿ ಅಧ್ಯಕ್ಷ ಆಲ್ವಿನ್ ಜೆರೊಮ್ ಡಿಸೋಜ ಪಾನೀರ್ ಇವರ ಮೇಲೆ ದಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಆಸ್ಪತ್ರೆ ದಾಖಲಾಗಿದ್ದಾರೆ. ಆಲ್ವಿನ್ ಅವರು ಉಳಿಯ ಪಾವೂರು, ರಾಣಿಪುರ, ಉಳ್ಳಾಲ ಹೊಯ್ಗೆ, 62ನೇ ತೋಕೂರು ಕೆಂಜಾರು ಈ ಪ್ರದೇಶಗಳ ದ್ವೀಪಗಳನ್ನು ಉಳಿಸುವ ಉದ್ದೇಶದಿಂದ ಸೆ.27ರಂದು ನಡೆಸಿದ ಬೃಹತ್ ಪ್ರತಿಭಟನೆಯ ಫಲವಾಗಿ ಶಾಂತಿ ಪ್ರಿಯರಾದ ನಮಗೆ ಸಿಕ್ಕ ಕಾಣಿಕೆಯಂತಾಗಿದೆ.
ಪ್ರಕೃತಿಯನ್ನು ನಾಶಗೊಳಿಸುವವರ ವಿರುದ್ಧ ನಮ್ಮ ಮೇಲೆ ಇನ್ನೆಷ್ಟು ಹಲ್ಲೆ ನಡೆಸಿದರೂ ನಮ್ಮ ಹೋರಾಟ ನಿರಂತರವಾಗಿ ಮುಂದುವರಿಯುತ್ತದೆ. ಆಲ್ವಿನ್ ಡಿಸೋಜರವರ ಮೇಲೆ ನಡೆಸಿರುವ ಮಾರಣಾಂತಿಕ ಹಲ್ಲೆ ಘಟನೆ ನಮ್ಮೆಲ್ಲರಿಗೂ ಅತೀವ ನೋವು ತಂದಿದೆ ಹಾಗೂ ನಮ್ಮನ್ನು ಭಯಭೀತರನ್ನಾಗಿಸಿದೆ. ಮುಂದಿನ 24 ಗಂಟೆಗಳ ಒಳಗೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಬಂಧಿಸಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ನ್ಯಾಯ ಸಿಗುವವರೆಗೆ ವಾಮಂಜೂರು ಗ್ರಾಮಾಂತರ ಪೋಲಿಸ್ ಠಾಣೆಯ ಮುಂದೆ ಪ್ರತಿಭಟನೆ ಕೈಗೊಳ್ಳಲಿದ್ದೇವೆ ಎಂದವರು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕೆಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಆದ್ಯಾತ್ಮಿಕ ನಿರ್ದೇಶಕ ಫಾ. ಜೆ.ಬಿ. ಸಲ್ಡಾನ್ಹಾ, ಮಾಜಿ ಅಧ್ಯಕ್ಷ ಪಾವ್ಲ್ ರೊಲ್ಫಿ ಡಿಕೋಸ್ತಾ, ನಿಕಟ ಪೂರ್ವ ಅಧ್ಯಕ್ಷ ಸ್ಟ್ಯಾನಿ ಲೋಬೊ, ಪ್ರಧಾನ ಕಾರ್ಯದರ್ಶಿ ಆಲ್ವಿನ್ ಪ್ರಶಾಂತ್ ಮೊಂತೇರೊ, ಸಾಮಾಜಿಕ ಹೋರಾಟಗಾರ ಸುನಿಲ್ ಕುಮಾರ್ ಬಜಾಲ್, ಪಾವೂರು ಉಳಿಯ ದ್ವೀಪ ನಿವಾಸಿ ಗಿಲ್ಬರ್ಟ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.
Catholic Sabha threatens of protest in front of Police Commissioner office in Mangalore for attack on Alwyn dSouza. Members of Catholic Sabha, Mangaluru, on Monday, October 7, threatened to stage a protest in front of the Police Commissioner’s office if the city police did not arrest all persons behind the assault on the sabha’s president Alwyn Jerome D’Souza on the outskirts of the city on October 5.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
20-06-25 11:04 pm
Mangalore Correspondent
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm