ಬ್ರೇಕಿಂಗ್ ನ್ಯೂಸ್
08-10-24 05:20 pm Mangalore Correspondent ಕರಾವಳಿ
ಮಂಗಳೂರು, ಅ.8: ಮಾಜಿ ಶಾಸಕ ಮೊಯ್ದೀನ್ ಬಾವ ಸೋದರ, ಹೆಸರಾಂತ ಉದ್ಯಮಿ ಮುಮ್ತಾಜ್ ಆಲಿ ನಿಗೂಢ ಸಾವಿಗೆ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಜಾಲವೇ ಕಾರಣ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಸೂತ್ರಧಾರೆ ಎನ್ನಲಾದ ಮಹಿಳೆ, ಆಕೆಯ ಪತಿ ಮತ್ತು ಇನ್ನೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮುಮ್ತಾಜ್ ಸಾವಿಗೆ ಆರು ಮಂದಿಯ ತಂಡ ನಡೆಸಿದ ಬ್ಲಾಕ್ಮೇಲ್ ಕಾರಣ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಸೇರಿದಂತೆ ಎರಡು ವಿಶೇಷ ತಂಡ ತನಿಖೆ ಆರಂಭಿಸಿದ್ದಾರೆ. ಪ್ರಕರಣ ಸಂಬಂಧಿಸಿ ಪೊಲೀಸರು ಆಯೆಷಾ ರೆಹ್ಮತ್ ಮತ್ತು ಆಕೆಯ ಪತಿ ಶೋಯಿಬ್ ಹಾಗೂ ಸಿರಾಜ್ ಎಂಬವರನ್ನು ಕಲ್ಲಡ್ಕದಲ್ಲಿ ಬಂಧಿಸಿದ್ದಾಗಿ ತಿಳಿದುಬಂದಿದೆ. ಇದೇ ವೇಳೆ, ಅಬ್ದುಲ್ ಸತ್ತಾರ್ ಮತ್ತು ಶಾಫಿ ನಂದಾವರ ಸೇರಿದಂತೆ ಇತರ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಆಯೆಷಾ ರೆಹ್ಮತ್, ಮುಮ್ತಾಜ್ ಆಲಿಯವರು ನಡೆಸುತ್ತಿದ್ದ ಕಾಲೇಜಿನಲ್ಲಿ ಕೆಲಸಕ್ಕಿದ್ದ ಮಹಿಳೆ. ಈ ವೇಳೆ, ಮುಮ್ತಾಜ್ ಆಲಿಯವರ ಜೊತೆಗೆ ಹತ್ತಿರದ ಒಡನಾಟ ಇರಿಸಿಕೊಂಡಿದ್ದರು ಎನ್ನಲಾಗಿದೆ. ಇದೇ ನೆಪದಲ್ಲಿ ಆರೋಪಿ ಮಹಿಳೆ, ಮುಮ್ತಾಜ್ ಆಲಿಯವರನ್ನು ಬ್ಲಾಕ್ಮೇಲ್ ಮಾಡಲು ಮುಂದಾಗಿದ್ದು ಇದಕ್ಕೆ ಆಕೆಯ ಪತಿ ಶೋಯಿಬ್ ಸಹಕಾರ ನೀಡಿದ್ದ. ಅಲ್ಲದೆ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸತ್ತಾರ್ ಮತ್ತು ಮರಳು ದಂಧೆಕೋರ ಶಾಫಿ ನಂದಾವರ ಸೇರಿಕೊಂಡು ಮುಮ್ತಾಜ್ ಆಲಿಯವರನ್ನು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ತೊಡಗಿದ್ದರು. ಕಳೆದ 3-4 ತಿಂಗಳಿನಿಂದ 50 ಲಕ್ಷಕ್ಕೂ ಹೆಚ್ಚು ದುಡ್ಡನ್ನು ಪೀಕಿಸಿಕೊಂಡಿರುವ ಈ ತಂಡವು, ಎರಡು ಕೋಟಿ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿತ್ತು.

ಇದಲ್ಲದೆ, ಮುಮ್ತಾಜ್ ಆಲಿ ತನ್ನ ಮಗುವಿನ ಜೊತೆಗೆ ಆಟವಾಡುತ್ತಿದ್ದ ವಿಡಿಯೋವನ್ನು ಮಾಡಿ, ಆರೋಪಿಗಳು ಆಲಿಯವರ ಕುಟುಂಬಸ್ಥರಿಗೆ ಕಳಿಸತೊಡಗಿದ್ದರು. ಈ ವಿಡಿಯೋ ಕಾರಣದಿಂದ ಮುಮ್ತಾಜ್ ಆಲಿ ತನ್ನ ಕುಟುಂಬಸ್ಥರ ನಡುವೆ ನಿಂದನೆಗೆ ಒಳಗಾಗಿದ್ದರು. ಇದೇ ಹಿಂಸೆಯಿಂದಾಗಿ ಮುಮ್ತಾಜ್ ಆಲಿ ಸಾಯಲು ಮುಂದಾಗಿದ್ದು ಮೊನ್ನೆ ನಡುರಾತ್ರಿಯೇ ಮನೆ ಬಿಟ್ಟು ಬಂದಿದ್ದರು. ಇದೇ ಹಿಂಸೆಯಿಂದ ನಸುಕಿನ ಹೊತ್ತಿಗೆ ಕಾರನ್ನು ಕುಳೂರಿನ ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿ ದುರಂತ ಸಾವಿಗೀಡಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯಕ್ಕೆ ಆರು ಮಂದಿ ಬ್ಲಾಕ್ಮೇಲರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಉಳಿದವರ ಪತ್ತೆಗಾಗಿ ಬಲೆ ಬೀಸಿದ್ದಾರೆ.
Mangalore Mumtaz Ali suicide, three including Blackmailer woman her husband arrested, search for prime accused.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm