ಬ್ರೇಕಿಂಗ್ ನ್ಯೂಸ್
11-12-20 01:18 pm Mangalore Correspondent ಕರಾವಳಿ
ಮಂಗಳೂರು, ಡಿ.11: ಕೆಎಸ್ಸಾರ್ಟಿಸಿ ಬಸ್ ನೌಕರರ ಮುಷ್ಕರದ ಬಿಸಿ ಕರಾವಳಿಗೆ ತಟ್ಟಿಲ್ಲ. ಮಂಗಳೂರು ಮತ್ತು ಉಡುಪಿಯಲ್ಲಿ ಬಸ್ ಸಂಚಾರ ಎಂದಿನಂತಿದ್ದು ಸಾರ್ವಜನಿಕರು ನಿರಾಳವಾಗಿದ್ದಾರೆ.
ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಎರಡು ದಿನಗಳಿಂದ ಸಿಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಯತ್ನ ನಡೆದಿತ್ತು. ಸರಕಾರ ಮಾತ್ರ, ಸಿಬಂದಿಯ ಬೇಡಿಕೆಯನ್ನು ಪರಿಗಣಿಸಿಲ್ಲ. ಸರಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಮಿಕರ ಯೂನಿಯನ್, ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇವತ್ತಿನ ಮುಷ್ಕರಕ್ಕೆ ಎಐಟಿಯುಸಿ ಬೆಂಬಲಿತರು ಬೆಂಬಲ ನೀಡಿಲ್ಲ. ಹೀಗಾಗಿ ಕರಾವಳಿಯಲ್ಲಿ ಬಹುತೇಕ ಸರಕಾರಿ ಬಸ್ ಗಳ ಸಂಚಾರ ಯಥಾಸ್ಥಿತಿ ಇದ್ದು ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮಂಗಳೂರು, ಪುತ್ತೂರು, ಧರ್ಮಸ್ಥಳ ಡಿಪೋದಿಂದ ಶುಕ್ರವಾರ ಬೆಳಗ್ಗೆಯಿಂದ ರಾಜ್ಯದ ವಿವಿಧ ಕಡೆಗಳಿಗೆ ಬಸ್ ಗಳು ಸಂಚಾರ ನಡೆಸುತ್ತಿವೆ. ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದಂತೆ ಉಡುಪಿ, ಕುಂದಾಪುರ ಕೇಂದ್ರಗಳಲ್ಲೂ ಬಸ್ ಸಂಚಾರ ವ್ಯತ್ಯಯ ಆಗಿಲ್ಲ. ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮುಷ್ಕರಕ್ಕೆ ರೈತ ಸಂಘಟನೆಗಳು ಬೆಂಬಲಿಸಿದ್ದು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಹಾಜರಾಗಿದ್ದಾರೆ. ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೆಎಸ್ಸಾರ್ಟಿಸಿ ಅಧಿಕಾರಿಗಳು ಮತ್ತು ಸಿಬಂದಿ ಯೂನಿಯನ್ ಜೊತೆ ಮಾತುಕತೆ ನಡೆಸಿದ್ದಾರೆ. ಈಗಿನ ಸನ್ನಿವೇಶದಲ್ಲಿ ಆ ಬೇಡಿಕೆಯನ್ನು ಈಡೇರಿಸಲು ಆಗದು ಎಂದು ಹೇಳಿದ್ದಾರೆ.
ಗುರುವಾರ ಸಾವಿರಾರು ಸಂಖ್ಯೆಯಲ್ಲಿ ಬಸ್ ನೌಕರರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ್ದರು. ಆದರೆ ಅವರನ್ನು ಅರ್ಧದಲ್ಲೇ ತಡೆದ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಬಸ್ ಸಿಬಂದಿಯ ಮುಷ್ಕರದ ಮಾಹಿತಿ ಇಲ್ಲದೆ ಪ್ರಯಾಣಿಕರು ಕೆಲವು ಕಡೆ ಪರದಾಡುವ ಪರಿಸ್ಥಿತಿ ಹಲವೆಡೆ ಉಂಟಾಗಿದೆ.
Bus strike of KSRTC in Karnataka, Mangalore gets no support. Buses move as usual creating no impact.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm