ಬ್ರೇಕಿಂಗ್ ನ್ಯೂಸ್
09-10-24 03:18 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ದ್ವೀಪದ ಮರಳುಗಾರಿಕೆ ವಿರುದ್ಧ ಹೋರಾಟದ ದನಿ ಎಬ್ಬಿಸಿದ್ದ ಕೆಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅತಾವುಲ್ಲಾ (40) ಹಾಗೂ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮಾರ್ನಮಿಕಟ್ಟೆ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಸಿರ್ (31) ಬಂಧಿತರು. ನೇತ್ರಾವತಿ ನದಿಯಲ್ಲಿ ಪಾವೂರು ಉಳಿಯ ದ್ವೀಪದ ಸುತ್ತ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಕೆಥೋಲಿಕ್ ಸಭಾ ನೇತೃತ್ವದಲ್ಲಿ ಸೆಪ್ಟೆಂಬರ್ 29ರಂದು ಪ್ರತಿಭಟನೆ ನಡೆದಿತ್ತು.


ಈ ಬಗ್ಗೆ ಪತ್ರಕರ್ತೆಯೊಬ್ಬರು ವರದಿ ಮಾಡುವುದಕ್ಕಾಗಿ ಅ.5ರಂದು ಅಲ್ವಿನ್ ಡಿಸೋಜ ಜೊತೆಗೆ ಪಾವೂರು ಉಳಿಯ ದ್ವೀಪದ ಸ್ಥಳಕ್ಕೆ ಬಂದಿದ್ದಾಗ, ಅಡ್ಯಾರ್ ಸೇತುವೆ ಬಳಿ ಅಡ್ಡಹಾಕಿದ್ದ ಮರಳು ದಂಧೆ ನಡೆಸುತ್ತಿದ್ದವರ ಪರವಾದ ಗುಂಪು ಆಲ್ವಿನ್ ಡಿಸೋಜ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆಗೀಡಾದ ಅಲ್ವಿನ್ ಡಿಸೋಜ ಆಸ್ಪತ್ರೆಗೆ ದಾಖಲಾಗಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.
ಆರೋಪಿ ಅತಾವುಲ್ಲಾ, ಅಲ್ವಿನ್ ಡಿಸೋಜರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದ. ಆರೋಪಿ ತೌಸಿರ್ ಬೈದು ಹಲ್ಲೆ ಮಾಡಿದ್ದ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸದಿದ್ದರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಕೆಥೋಲಿಕ್ ಸಭಾದಿಂದ ಎಚ್ಚರಿಕೆ ನೀಡಲಾಗಿತ್ತು.
Attack on President of Catholic Sabha Alwyn DSouza in Mangalore, two arrested by police. Alwyn was allegedly attacked by sand miners near Harekala bridge on Saturday, October 5. A police communique said Mr. D’Souza was attacked at about 3 p.m. on Saturday when he with one Vijaylaxmi Shibrur and videographers were visiting a place near Harekala bridge.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am