ಬ್ರೇಕಿಂಗ್ ನ್ಯೂಸ್
09-10-24 07:04 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೇ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ ಎರಡು ಕಿಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ.
ಕೆಥೋಲಿಕ್ ಸಭಾ ವತಿಯಿಂದ ನಿರಂತರ ಪ್ರತಿಭಟನೆ, ಮಾಧ್ಯಮಗಳ ವರದಿ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚತ್ತುಕೊಂಡಿದೆ. ಈ ಹಿಂದೆ 2015ರಲ್ಲಿ ಎ.ಬಿ. ಇಬ್ರಾಹಿಂ ಜಿಲ್ಲಾಧಿಕಾರಿ ಆಗಿದ್ದಾಗ ಪಾವೂರು ಉಳಿಯ ದ್ವೀಪದ ಸುತ್ತ ಮರಳುಗಾರಿಕೆ ನಿಷೇಧ ಮಾಡಿದ್ದರು. ಆದರೆ ಆನಂತರ, ಹೈಕೋರ್ಟ್ ಮೂಲಕ ಮರಳು ದಂಧೆಕೋರರು ಜಿಲ್ಲಾಡಳಿತದ ಆದೇಶವನ್ನು ರದ್ದುಪಡಿಸುವಂತೆ ಮಾಡಿದ್ದರು.
ಈಗ ಹೊರಡಿಸಿರುವ ಆದೇಶದಲ್ಲಿ, ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತ ದಕ್ಕೆಗಳಲ್ಲಿ ಮರಳು ಶೇಖರಿಸುವುದನ್ನು ಮತ್ತು ವಾಹನಗಳಿಗೆ ಮರಳು ಹಂಚುವುದನ್ನು ಕೂಡ ತಕ್ಷಣದಿಂದ ನಿಷೇಧಿಸಲಾಗಿದೆ.
1) ಅಡ್ಯಾರು ಗ್ರಾಮದ ವಲಚ್ಚಿಲ್ ದಕ್ಕೆ, 2) ಅಡ್ಯಾರು ಗ್ರಾಮ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದ ದಕ್ಕೆ, 3) ನದಿಯ ದ್ವೀಪದ ಎಡಭಾಗದಲ್ಲಿರುವ ಪಾವೂರು ದಕ್ಕೆ ಮರಳುಗಾರಿಕೆಗೆ ನಿಷೇಧಿತ ಪ್ರದೇಶವಾಗಿದೆ.
ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಯಾವುದೇ ಪ್ರಕರಣಗಳು ಗಮನಕ್ಕೆ ಬಂದಲ್ಲಿ ಸಂಬಂಧಿಸಿದವರ ವಿರುದ್ಧ ನಿಯಾಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
uliya after protest. Members of Catholic Sabha, Mangaluru, and other pro-people organisations took out a marched protesting unabated illegal extraction of sand from the Netravathi riverbed thereby threatening the existence of Pavoor-Uliya Kudru (river island) on Friday, September 27.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm