ಬ್ರೇಕಿಂಗ್ ನ್ಯೂಸ್
09-10-24 10:22 pm Mangalore Correspondent ಕರಾವಳಿ
ಮಂಗಳೂರು, ಅ.9: ಉಪನ್ಯಾಸಕ ಅರುಣ್ ಉಳ್ಳಾಲ್ ಅವರು ಹಿಂದುಗಳ ಶಿಕ್ಷಣ ಕೇಂದ್ರದಲ್ಲಿ ಶಿಕ್ಷಣ ಪಡೆಯಬೇಕು, ಹಿಂದು ದೇವಸ್ಥಾನ, ಇನ್ನಿತರ ಸಭಾಂಗಣಗಳನ್ನೇ ಬಳಸಬೇಕು, ಹಿಂದು ಸಂಸ್ಕೃತಿಯನ್ನೇ ಅಳವಡಿಸಿಕೊಳ್ಳಬೇಕು ಎಂದು ಹೇಳಿರುವುದು ಯಾವ ಕೋನದಲ್ಲಿ ಅಪರಾಧವಾಗುತ್ತದೆ ಎಂದು ಪೊಲೀಸ್ ಕಮಿಷನರ್ ಹೇಳಬೇಕು. ಪೊಲೀಸರು ತಾಕತ್ತಿದ್ದರೆ ಬಾಂಗ್ಲಾ ರೀತಿಯಲ್ಲಿ ರಾಜ್ಯಪಾಲರನ್ನು ಓಡಿಸುತ್ತೇವೆಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಐವಾನ್ ಡಿಸೋಜ ವಿರುದ್ಧ ಸುಮೊಟೋ ಕೇಸು ದಾಖಲಿಸಲಿ ಎಂದು ಹಿಂದು ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಅರುಣ್ ಉಳ್ಳಾಲ್ ಅವರು ವಾರಕ್ಕೊಮ್ಮೆ ಮಕ್ಕಳಿಗೆ ಹಿಂದು ಸಂಸ್ಕೃತಿ ಹೇಳಿಕೊಡುವ ಕೆಲಸ ಮಾಡುತ್ತಿದ್ದಾರೆ. ಆ ಕಾರಣಕ್ಕೆ ಕ್ರಿಶ್ಚಿಯನ್, ಕಮ್ಯುನಿಸ್ಟ್ ಶಕ್ತಿಗಳು ಟಾರ್ಗೆಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಅಪರಾಧ ಹಿನ್ನೆಲೆ ಇಲ್ಲದೆ, ಒಬ್ಬ ಪಿಎಚ್ ಡಿ ಮಾಡಿರುವ ಕವಿ, ಸೃಜನಶೀಲ ವ್ಯಕ್ತಿಯನ್ನು ಪೊಲೀಸರು ಆರೋಪಿ ಮಾಡಿದ್ದಾರೆ. ಇದಕ್ಕೆ ಸೋಕಾಲ್ಡ್ ಕಮ್ಯುನಿಸ್ಟ್ ಧೋರಣೆಯ ವ್ಯಕ್ತಿಗಳು, ಕ್ರಿಶ್ಚಿಯನ್ ಮಾನಸಿಕತೆ ಕಾರಣ. ಜಾತ್ಯತೀತ ವ್ಯವಸ್ಥೆಯನ್ನು ಹಿಂದುಗಳ ಮೇಲೆ ಹೇರಲು ಹೊರಟಿರುವವರು, ಆಗ್ನೆಸ್ ಕಾಲೇಜಿನಲ್ಲಿ ತಮ್ಮದೇ ಸಮುದಾಯದವರಿದ್ದಾರೆಂದು ಅರುಣ್ ಉಳ್ಳಾಲ್ ಅವರನ್ನು ಹುದ್ದೆಯಿಂದ ನಿರಾಕರಣೆ ಮಾಡಿದ್ದರು. ಆ ಕಾರಣಕ್ಕೆ ಆರು ತಿಂಗಳ ಹಿಂದೆಯೇ ಅರುಣ್ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿದ್ದರು. ಇವರು ಹೇಳಿದ ಹಾಗೆ, ಈಗ ಅವರನ್ನು ತೆಗೆದುಹಾಕಿದ್ದಲ್ಲ.
ಕರಾವಳಿಯಲ್ಲಿ ಹಿಂದು ಸಂಘಟನೆಯ ಬಲ ಮುರಿಯುವುದಕ್ಕಾಗಿ ಕಮ್ಯುನಿಸ್ಟ್ ಐಡಿಯಾಲಜಿ, ಕ್ರಿಶ್ಚಿಯನ್ನರ ಮನಿ ಪವರ್ ಮತ್ತು ಇಸ್ಲಾಮಿಕ್ ಜಿಹಾದಿಗಳ ಮ್ಯಾನ್ ಪವರ್ ಬಳಸಿಕೊಂಡು ತಮ್ಮನ್ನು ತಾವು ಕಮ್ಯುನಿಸ್ಟ್ ಎಂದು ಹೇಳಿಕೊಳ್ಳುವವರು ಕೆಲಸ ಮಾಡುತ್ತಿದ್ದಾರೆ. ವಾರಕ್ಕೊಮ್ಮೆ ಇಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎನ್ನುವುದು ನಮ್ಮ ಅರಿವಿಗೆ ಬಂದಿದೆ. ಹಿಂದುಗಳನ್ನು, ಹಿಂದು ಸಂಘಟನೆಗಳನ್ನು ಮಾತ್ರ ಟಾರ್ಗೆಟ್ ಮಾಡಿರುವುದು ಇವರ ಅಜೆಂಡಾವನ್ನು ತೋರಿಸುತ್ತದೆ. ಇದಕ್ಕೆ ಪ್ರತಿಯಾಗಿ, ನಾವು ಕೂಡ ಹಿಂದುಗಳನ್ನು ಜನಜಾಗೃತಿ ಮಾಡುವ ಕೆಲಸ ಮಾಡುತ್ತೇವೆ ಎಂದು ಶ್ರೀಕಾಂತ್ ಶೆಟ್ಟಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ನರಸಿಂಹ ಮಾಣಿ, ಪ್ರವೀಣ್ ಬಂಟ್ವಾಳ ಮತ್ತಿತರರು ಇದ್ದರು.
Shrikanth Shetty slams mangalore police commissioner over booking case against Arun Ullal. Shrikanth Shetty slams mangalore police commissioner over booking case against Arun Ullal.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm