ಬ್ರೇಕಿಂಗ್ ನ್ಯೂಸ್
09-10-24 10:52 pm Mangalore Correspondent ಕರಾವಳಿ
ಮಂಗಳೂರು, ಅ.9: ಮಂಗಳೂರು – ಬೆಂಗಳೂರು ಸಂಚರಿಸುವ ಹೆದ್ದಾರಿಯ ಶಿರಾಡಿ ಘಾಟ್, ಕಲ್ಲಡ್ಕ ಹೇಗೂ ದುರವಸ್ಥೆ ಆಗಿಹೋಗಿದೆ. ಯಾವುದೇ ರಸ್ತೆ ಮಾಡುವುದಿದ್ದರೂ, ತಾತ್ಕಾಲಿಕ ವ್ಯವಸ್ಥೆ ಮಾಡಿದ ಮೇಲಷ್ಟೇ ಕಾಮಗಾರಿ ಮಾಡಿ ಎಂದರೆ, ಅಧಿಕಾರಸ್ಥರ ಕಿವಿ ತಲುಪುತ್ತಿಲ್ಲ. ಈಗ ಅಳಿದುಳಿದ ಹೆದ್ದಾರಿಯ ಸ್ಥಿತಿಯೂ ಶೋಚನೀಯ ಎನ್ನುವಂತಾಗಿದೆ. ಮಂಗಳೂರು ನಗರದ ಪಡೀಲ್, ಅಡ್ಯಾರಿನಲ್ಲಿ ಬಿದ್ದಿರುವ ಗುಂಡಿಗಳು ಯಾರದ್ದೋ ಬಲಿಗಾಗಿ ಕಾದಿರುವಂತೆ ಭಾಸವಾಗುತ್ತಿವೆ.
ಪಡೀಲ್ ಹೆದ್ದಾರಿಯ ರೈಲ್ವೇ ಸೇತುವೆ ಎದುರಲ್ಲೇ ದೊಡ್ಡ ದೊಡ್ಡ ಗುಂಡಿಗಳು ಬಾಯ್ದೆರೆದು ನಿಂತಿವೆ. ಹೆದ್ದಾರಿ ನಡುವಲ್ಲಿ ಮತ್ತು ಬದಿಯಲ್ಲಿ ಉದ್ದಕ್ಕೂ ಗುಂಡಿಗಳು ಬಿದ್ದರೂ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿದ್ದೆಯಲ್ಲಿದ್ದಾರೆ. ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗ, ಜೆಸಿಬಿ ಶೋರೂಮ್ ಶಾಪ್ ಎದುರಿನ ಭಾಗದಲ್ಲಿ ಹೊಂಡಗಳು ಉಂಟಾಗಿವೆ. ಮಳೆಯಿಂದಾಗಿ ಇದರಲ್ಲಿ ನೀರು ನಿಲ್ಲುವ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳು ಇದರ ಆಳ ಅರಿವಿಲ್ಲದೆ ಗುಂಡಿಗೆ ಬಿದ್ದರೆ, ಮತ್ತೆ ಏಳಲಾಗದೆ ದೊಡ್ಡ ವಾಹನಗಳ ಅಡಿಗೆ ಸಿಲುಕುವ ಸಾಧ್ಯತೆಯಿದೆ.








ಈ ನಡುವೆ, ಮತ್ತೆ ಮಳೆಯ ಮುನ್ಸೂಚನೆ ಇರುವುದರಿಂದ ಹೆದ್ದಾರಿಯ ಗುಂಡಿಗಳನ್ನು ಹೆದ್ದಾರಿ ಪ್ರಾಧಿಕಾರಗಳು, ಜನಪ್ರತಿನಿಧಿಗಳು ನೋಡಿಯೂ ನೋಡದಂತೆ ಚಲಿಸುವುದು ತರವಲ್ಲ. ಈ ರೀತಿಯ ಗುಂಡಿಗಳೇ ಮರಣ ಗುಂಡಿಗಳಂತಾಗಿದ್ದನ್ನು ಹಲವು ಬಾರಿ ಕಂಡಿದ್ದೇವೆ. ಪಡೀಲಿನ ಉದ್ದಕ್ಕೂ ಹೆದ್ದಾರಿ ಬದಿಯಲ್ಲೂ ನೀರು ನಿಂತು ಆಳ ಗುಂಡಿಗಳೆದ್ದಿದ್ದು ಅವನ್ನು ಸ್ಥಳೀಯರು ಮಣ್ಣು, ಕಲ್ಲು ತುಂಬಿ ಒಮ್ಮೆಗೆ ತುಂಬಿಸಿದರೂ, ಮತ್ತೆ ಅವು ಬಾಯ್ದೆರೆದು ನಿಲ್ಲುತ್ತವೆ. ತುಂಬೆಯಲ್ಲಿ 15 ವರ್ಷಗಳಿಂದ ಈ ಹೆದ್ದಾರಿಯ ಕಾರಣಕ್ಕೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿದ್ದರೂ, ಈ ರಸ್ತೆಯನ್ನು ದುರಸ್ತಿ ಪಡಿಸುವ ಕಾಳಜಿ ಆಳುವವರಿಗಿಲ್ಲ.
ಪಣಂಬೂರು, ಕುಳಾಯಿ ಭಾಗದಲ್ಲಿ ಇದೇ ರೀತಿ ಹೆದ್ದಾರಿ ಗುಂಡಿ ಬಿದ್ದಿದ್ದರೂ, ಕೆಲವನ್ನು ಮುಚ್ಚಲಾಗಿದೆ. ಇನ್ನೂ ಅನೇಕ ಗುಂಡಿಗಳು ಅಲ್ಲಲ್ಲಿ ಎದ್ದು ಕುಳಿತಿದ್ದು, ಪ್ರಯಾಣಿಕರನ್ನು ಹೈರಾಣು ಮಾಡಿವೆ.
Mangalore Deadly potholes at Padil near JCB showroom. Highway authorities show negligence even after huge traffic. Two wheelers and cards face huge problems.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm