ಬ್ರೇಕಿಂಗ್ ನ್ಯೂಸ್
09-10-24 10:52 pm Mangalore Correspondent ಕರಾವಳಿ
ಮಂಗಳೂರು, ಅ.9: ಮಂಗಳೂರು – ಬೆಂಗಳೂರು ಸಂಚರಿಸುವ ಹೆದ್ದಾರಿಯ ಶಿರಾಡಿ ಘಾಟ್, ಕಲ್ಲಡ್ಕ ಹೇಗೂ ದುರವಸ್ಥೆ ಆಗಿಹೋಗಿದೆ. ಯಾವುದೇ ರಸ್ತೆ ಮಾಡುವುದಿದ್ದರೂ, ತಾತ್ಕಾಲಿಕ ವ್ಯವಸ್ಥೆ ಮಾಡಿದ ಮೇಲಷ್ಟೇ ಕಾಮಗಾರಿ ಮಾಡಿ ಎಂದರೆ, ಅಧಿಕಾರಸ್ಥರ ಕಿವಿ ತಲುಪುತ್ತಿಲ್ಲ. ಈಗ ಅಳಿದುಳಿದ ಹೆದ್ದಾರಿಯ ಸ್ಥಿತಿಯೂ ಶೋಚನೀಯ ಎನ್ನುವಂತಾಗಿದೆ. ಮಂಗಳೂರು ನಗರದ ಪಡೀಲ್, ಅಡ್ಯಾರಿನಲ್ಲಿ ಬಿದ್ದಿರುವ ಗುಂಡಿಗಳು ಯಾರದ್ದೋ ಬಲಿಗಾಗಿ ಕಾದಿರುವಂತೆ ಭಾಸವಾಗುತ್ತಿವೆ.
ಪಡೀಲ್ ಹೆದ್ದಾರಿಯ ರೈಲ್ವೇ ಸೇತುವೆ ಎದುರಲ್ಲೇ ದೊಡ್ಡ ದೊಡ್ಡ ಗುಂಡಿಗಳು ಬಾಯ್ದೆರೆದು ನಿಂತಿವೆ. ಹೆದ್ದಾರಿ ನಡುವಲ್ಲಿ ಮತ್ತು ಬದಿಯಲ್ಲಿ ಉದ್ದಕ್ಕೂ ಗುಂಡಿಗಳು ಬಿದ್ದರೂ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿದ್ದೆಯಲ್ಲಿದ್ದಾರೆ. ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗ, ಜೆಸಿಬಿ ಶೋರೂಮ್ ಶಾಪ್ ಎದುರಿನ ಭಾಗದಲ್ಲಿ ಹೊಂಡಗಳು ಉಂಟಾಗಿವೆ. ಮಳೆಯಿಂದಾಗಿ ಇದರಲ್ಲಿ ನೀರು ನಿಲ್ಲುವ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳು ಇದರ ಆಳ ಅರಿವಿಲ್ಲದೆ ಗುಂಡಿಗೆ ಬಿದ್ದರೆ, ಮತ್ತೆ ಏಳಲಾಗದೆ ದೊಡ್ಡ ವಾಹನಗಳ ಅಡಿಗೆ ಸಿಲುಕುವ ಸಾಧ್ಯತೆಯಿದೆ.








ಈ ನಡುವೆ, ಮತ್ತೆ ಮಳೆಯ ಮುನ್ಸೂಚನೆ ಇರುವುದರಿಂದ ಹೆದ್ದಾರಿಯ ಗುಂಡಿಗಳನ್ನು ಹೆದ್ದಾರಿ ಪ್ರಾಧಿಕಾರಗಳು, ಜನಪ್ರತಿನಿಧಿಗಳು ನೋಡಿಯೂ ನೋಡದಂತೆ ಚಲಿಸುವುದು ತರವಲ್ಲ. ಈ ರೀತಿಯ ಗುಂಡಿಗಳೇ ಮರಣ ಗುಂಡಿಗಳಂತಾಗಿದ್ದನ್ನು ಹಲವು ಬಾರಿ ಕಂಡಿದ್ದೇವೆ. ಪಡೀಲಿನ ಉದ್ದಕ್ಕೂ ಹೆದ್ದಾರಿ ಬದಿಯಲ್ಲೂ ನೀರು ನಿಂತು ಆಳ ಗುಂಡಿಗಳೆದ್ದಿದ್ದು ಅವನ್ನು ಸ್ಥಳೀಯರು ಮಣ್ಣು, ಕಲ್ಲು ತುಂಬಿ ಒಮ್ಮೆಗೆ ತುಂಬಿಸಿದರೂ, ಮತ್ತೆ ಅವು ಬಾಯ್ದೆರೆದು ನಿಲ್ಲುತ್ತವೆ. ತುಂಬೆಯಲ್ಲಿ 15 ವರ್ಷಗಳಿಂದ ಈ ಹೆದ್ದಾರಿಯ ಕಾರಣಕ್ಕೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿದ್ದರೂ, ಈ ರಸ್ತೆಯನ್ನು ದುರಸ್ತಿ ಪಡಿಸುವ ಕಾಳಜಿ ಆಳುವವರಿಗಿಲ್ಲ.
ಪಣಂಬೂರು, ಕುಳಾಯಿ ಭಾಗದಲ್ಲಿ ಇದೇ ರೀತಿ ಹೆದ್ದಾರಿ ಗುಂಡಿ ಬಿದ್ದಿದ್ದರೂ, ಕೆಲವನ್ನು ಮುಚ್ಚಲಾಗಿದೆ. ಇನ್ನೂ ಅನೇಕ ಗುಂಡಿಗಳು ಅಲ್ಲಲ್ಲಿ ಎದ್ದು ಕುಳಿತಿದ್ದು, ಪ್ರಯಾಣಿಕರನ್ನು ಹೈರಾಣು ಮಾಡಿವೆ.
Mangalore Deadly potholes at Padil near JCB showroom. Highway authorities show negligence even after huge traffic. Two wheelers and cards face huge problems.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm