ಬ್ರೇಕಿಂಗ್ ನ್ಯೂಸ್
10-10-24 01:52 pm Mangalore Correspondent ಕರಾವಳಿ
ಮಂಗಳೂರು, ಅ.10: ಮಂಗಳೂರಿನ ಹೆಸರಾಂತ ಲೋಟಸ್ ಪ್ರಾಪರ್ಟೀಸ್ ಬಿಲ್ಡರ್ಸ್ ಸಂಸ್ಥೆಯ ಪಾಲುದಾರ, ಬಿಲ್ಡರ್ ಜಿತೇಂದ್ರ ಕೊಟ್ಟಾರಿ ಅವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು ಇಬ್ಬರು ಯುವಕರನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರ ಅಣ್ಣನ ಮಗ, ಮಂಗಳೂರಿನಲ್ಲಿ ಎನ್ಎಸ್ ಯುಐ ಕಾರ್ಯಕರ್ತನಾಗಿರುವ ಅನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧಿತರು. ಅನುಷ್ ಶೆಟ್ಟಿ ಕಳೆದ ಚುನಾವಣೆ ಸಂದರ್ಭದಲ್ಲಿ ನೋಟಾ ಪರವಾಗಿ ಅಭಿಯಾನ ನಡೆಸಿದ್ದ.

ಜಿತೇಂದ್ರ ಕೊಟ್ಟಾರಿ ಬುಧವಾರ ಸಂಜೆ ಏರ್ಪೋರ್ಟ್ ಕಡೆಯಿಂದ ತನ್ನ ಆಡಿ ಕಾರಿನಲ್ಲಿ ಬಂದಿದ್ದು ಈ ವೇಳೆ ಯುವಕರಿದ್ದ ಕಾರನ್ನು ಓವರ್ ಟೇಕ್ ಮಾಡಿಕೊಂಡು ಬಂದಿದ್ದರು ಎನ್ನಲಾಗಿದೆ. ಇದೇ ಕಾರಣಕ್ಕೆ ಹಿಂಬಾಲಿಸಿಕೊಂಡು ಬಂದಿದ್ದ ಯುವಕರು, ಜಿತೇಂದ್ರ ಕೊಟ್ಟಾರಿ ಅವರು ತನ್ನ ಕೊಡಿಯಾಲಬೈಲಿನ ಮನೆಗೆ ತಲುಪಿದಾಗ, ಅವಾಚ್ಯವಾಗಿ ನಿಂದಿಸಿ ಮನೆಯ ಒಳಗೆ ನುಗ್ಗಲು ಯತ್ನಿಸಿದ್ದಾರೆ. ಅಲ್ಲದೆ, ಕಾರನ್ನು ಕಾಂಪೌಂಡ್ ಒಳಗಡೆ ತಂದು ಜಿತೇಂದ್ರ ಕೊಟ್ಟಾರಿ ಮತ್ತು ಅವರ ಪತ್ನಿಯ ಮೇಲೆ ಕೈಮಾಡಲು ಯತ್ನಿಸಿದ್ದಾರೆ. ಕೂಡಲೇ ಕೊಟ್ಟಾರಿ ಬರ್ಕೆ ಠಾಣೆಗೆ ಮಾಹಿತಿ ನೀಡಿದ್ದು ಪೊಲೀಸರು ಬಂದು ಸ್ಥಳದಿಂದಲೇ ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Jitendra Kottary builder of Lotus Properties attacked and assaulted, two arrested. The fight erupted after kottary overtook youth youth while on his way home from airport. Barke police have registered a case.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm