ಬ್ರೇಕಿಂಗ್ ನ್ಯೂಸ್
12-10-24 12:45 pm Udupi Correspondent ಕರಾವಳಿ
ಉಡುಪಿ, ಅ.12: ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಅಧಿಕಾರಿಯೆಂಬ ಹೆಸರಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನ ವ್ಯವಸ್ಥೆ ಮಾಡಿಕೊಂಡ ಪ್ರಸಂಗ ನಡೆದಿದ್ದು ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಅ.9ರಂದು ಉದಯ್ ಹೆಸರಿನ ವ್ಯಕ್ತಿ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್ ಆಚಾರ್ಯ ಅವರಿಗೆ ಕರೆ ಮಾಡಿದ್ದು, ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದ. ನಾವು ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದ. ಅದರಂತೆ ಅ.9ರಂದು ಭಾರತ ಸರಕಾರ ಎಂದು ಬರೆದ ಇನ್ನೋವಾ ಕಾರಿನಲ್ಲಿ ಆಗಮಿಸಿದ ಡಾ| ಉದಯ್ ಹಾಗು ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿ ಅ. 10ರಂದು ಬೆಳಗ್ಗೆ ವಿಶೇಷ ದರ್ಶನ ಮಾಡಿಸಲಾಗಿತ್ತು.
ಆದರೆ ಅವರ ವರ್ತನೆಯಿಂದ ಅನುಮಾನಗೊಂಡು ವಿಚಾರಿಸಿದಾಗ ಸೂಕ್ತ ಉತ್ತರವನ್ನು ನೀಡದೇ ತೆರಳಿದ್ದಾರೆ. ಪ್ರಧಾನ ಮಂತ್ರಿಗಳ ವೆಬ್ಸೈಟ್ ಪರಿಶೀಲಿಸಿದಾಗ ಇವರ ಬಗ್ಗೆ ಸಮರ್ಪಕ ಮಾಹಿತಿ ದೊರೆತಿಲ್ಲ. ಕೇಂದ್ರ ಸರಕಾರದ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ಶ್ರೀ ಮಠಕ್ಕೆ ಆಗಮಿಸಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಮಠದ ಮ್ಯಾನೇಜರ್ ನಂದನ್ ದೂರು ನೀಡಿದ್ದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been filed against an individual who posed as the parliamentary chief secretary of the Prime Minister's Office (PMO) and obtained a special darshan of Lord Krishna at the Sri Krishna Math in Udupi.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am