ಬ್ರೇಕಿಂಗ್ ನ್ಯೂಸ್
13-10-24 02:52 pm Mangalore Correspondent ಕರಾವಳಿ
ಮಂಗಳೂರು, ಅ.13: ತಲಪಾಡಿಯ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೇಟಿಗೆ ಕೇರಳ ರಾಜ್ಯ ಸರ್ಕಾರದ ಓಣಂ ಬಂಪರ್ ಡ್ರಾ ಯೋಜನೆಯ ಎರಡನೇ ಬಹುಮಾನ ರೂ. ಒಂದು ಕೋಟಿ ಬಹುಮಾನ ಒಲಿದಿದೆ. ಒಂಟಿ ಮಹಿಳೆಗೆ ಲಾಟರಿ ಒಲಿದಿರುವುದರಿಂದ ಹೆಸರು ಮತ್ತು ಊರು ಹೇಳಲು ಅವರು ನಿರಾಕರಿಸಿದ್ದಾರೆ ಎಂದು ಲಾಟರಿ ಅಂಗಡಿ ಮಾಲೀಕ ಕನಕದಾಸ್ ತಿಳಿಸಿದ್ದಾರೆ.
ಕಳೆದ 30 ವರ್ಷಗಳಲ್ಲಿ ಕನಕದಾಸ್ ಅವರ ಅಂಗಡಿಯಿಂದ ಟಿಕೇಟ್ ಪಡೆದ 6 ಮಂದಿ ಲಾಟರಿ ಗೆಲುವು ಸಾಧಿಸಿದ್ದು, ನಾಲ್ಕು ಮಂದಿಗೆ ರೂ.1 ಕೋಟಿ ಒಲಿದಿದ್ದರೆ, ಮತ್ತಿಬ್ಬರಿಗೆ 75 ಲಕ್ಷ ರೂ. ಮತ್ತು 80 ಲಕ್ಷ ರೂ. ಸಿಕ್ಕಿದೆ. ಈ ಬಾರಿಯ ಓಣಂ ಬಂಪರ್ ಲಾಟರಿಯಲ್ಲಿ ಮಹಿಳೆಯೊಬ್ಬರು ಇದೇ ಅಂಗಡಿಯಿಂದ ಟಿಕೆಟ್ ಪಡೆದು ಒಂದು ಕೋಟಿ ಗೆದ್ದಿದ್ದಾರೆ.
ಲಾಟರಿ ವಿಜೇತ ಪ್ರತಿಯೊಬ್ಬರಿಗೂ ಮಂಜೇಶ್ವರ ಸರ್ವಿಸ್ ಕೋಪರೇಟಿವ್ ಬ್ಯಾಂಕ್ ಮೂಲಕ ಹಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಹಿಂದೆ ಬೇರೆ ರಾಜ್ಯದವರಿಗೆ ಲಾಟರಿ ಖರೀದಿಗೆ ಅವಕಾಶ ಇರಲಿಲ್ಲ. ಉಮ್ಮನ್ ಚಾಂಡಿ ಮುಖ್ಯಮಂತ್ರಿಯಾಗಿದ್ದಾಗ, ಲಾಟರಿ ಏಜೆಂಟರ ಸಭೆಗಳಲ್ಲಿ ಧ್ವನಿ ಎತ್ತಿದ ಪರಿಣಾಮವಾಗಿ ಇತರ ರಾಜ್ಯದ ಜನರಿಗೂ ಲಾಟರಿ ಸಿಗುವಂತೆ ಆಗಿದೆ. ಸರಕಾರದ ಕಾನೂನುಗಳನ್ನು ಪಾಲಿಸಿಕೊಂಡು, ಪಾಲಕ್ಕಾಡ್ ಡಿವಿಷನ್ನಿನ ಲಾಟರಿಗಳನ್ನಷ್ಟೇ ಮಾರಾಟ ಮಾಡುತ್ತಿದ್ದೇನೆ ಅನ್ನುತ್ತಾರೆ ಅಂಗಡಿ ಮಾಲೀಕ ಕನಕದಾಸ್.
ಅವರಲ್ಲಿ ಇರುವುದು ಪಾಲಕ್ಕಾಡ್ ವಿಭಾಗದ ಟಿಕೇಟ್ ಮಾತ್ರ. ಹೆಚ್ಚಾಗಿ ಪಾಲ್ಘಾಟ್ ಟಿಕೇಟುಗಳಿಗೆ ಲಾಟರಿ ಒಲಿಯುತ್ತಿರುವುದರಿಂದ ಕನಕದಾಸ್ ಅವರ ಗ್ರಾಹಕರಿಗೂ ಬಹುಮಾನ ಲಭಿಸಿದೆ. ತನಗೂ ಸಣ್ಣ ಮೊತ್ತದ ಬಹುಮಾನ ಬಂದಿದೆ. ಮುಂದೊಂದು ದಿನ ಅವರ ಟಿಕೇಟ್ ಪಡೆದು ಕೋಟಿ ಗಳಿಸುವ ಕನಸು ಇದೆ ಎಂದು ಸ್ಥಳೀಯ ಅಂಗಡಿ ಮಾಲೀಕ ಕುಂಞ್ಞಾಲಿ ಕುಟ್ಟಿ ಹೇಳಿದ್ದಾರೆ.
ಈ ಬಾರಿ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ಮೊದಲ ಬಹುಮಾನ ಮಂಡ್ಯ ಜಿಲ್ಲೆಯ ಪಾಂಡವಪುರ ಮೂಲದ ವ್ಯಕ್ತಿಗೆ ಒಲಿದಿತ್ತು. ಎರಡನೇ ಬಹುಮಾನ 20 ಮಂದಿಗೆ ತಲಾ ಒಂದು ಕೋಟಿ ಇತ್ತು. ತಲಪಾಡಿ ಆಸುಪಾಸಿನ ಬಡ ಮಹಿಳೆಗೆ ಈ ಬಹುಮಾನ ಬಂದಿದ್ದು ವಿಶೇಷ.
The second prize of this year’s Onam bumper lottery of Rs 1 crore has been won by a woman who purchased her ticket from the Stree Shakti lottery agency in Talapady, owned by K R Kanakdas.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm