ಬ್ರೇಕಿಂಗ್ ನ್ಯೂಸ್
14-10-24 01:37 pm Mangalore Correspondent ಕರಾವಳಿ
ಮಂಗಳೂರು, ಅ.14: ನಸುಕಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಬಾಂಬಿಲ ಮಸೀದಿ ತಿರುವಿನಲ್ಲಿ ನಡೆದಿದ್ದು ಕಾರಿನಲ್ಲಿದ್ದ ಮಂಗಳೂರಿನ ಮಹಿಳೆ ಮೃತಪಟ್ಟಿದ್ದಾರೆ.
ಮಂಗಳೂರು ನಗರದ ಕೊಡಿಯಾಲಬೈಲು ನಿವಾಸಿ ಭಾಗೀರಥಿ (58 ) ಮೃತರು. ಕಾರು ಚಲಾಯಿಸುತ್ತಿದ್ದ ಮೂಲತಃ ತುಮಕೂರು ನಿವಾಸಿ ರೂಪೇಶ್ (40) ಗಂಭೀರ ಗಾಯಗೊಂಡಿದ್ದಾರೆ. ರೂಪೇಶ್ ಅವರ ಪತ್ನಿ, ಭಾಗೀರಥಿ ಅವರ ಪುತ್ರಿ ಸುಚಿತ್ರಾ (33) ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ರೂಪೇಶ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೂಪೇಶ್ ಮೂಲತಃ ತುಮಕೂರು ನಿವಾಸಿಯಾಗಿದ್ದು ಮಂಗಳೂರಿನ ಸುಚಿತ್ರಾ ಅವರನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದ್ದರು. ನವರಾತ್ರಿ ಹಿನ್ನೆಲೆಯಲ್ಲಿ ತುಮಕೂರಿಗೆ ಹೋಗಿ ಮರಳುತ್ತಿದ್ದರು ಎನ್ನಲಾಗಿದೆ. ಚಾರ್ಮಾಡಿ- ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದಾಗ ಮುಂಜಾನೆ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಭಾಗೀರಥಿ ಮೃತಪಟ್ಟಿದ್ದಾರೆ. ಭಾಗೀರಥಿಯವರ ಸೋದರ ಗೋಪಾಲ್ ಮಂಗಳೂರಿನಲ್ಲಿ ಪಿಡಬ್ಲ್ಯುಡಿ ಇಂಜಿನಿಯರ್ ಆಗಿದ್ದಾರೆ.
ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು ಹೆದ್ದಾರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore punjalkatte accident, 58 year old woman dies on spot. Three people were traveling in the car, including Bhagirathi (58), a resident of Kodiyal Bailu, who unfortunately lost her life. The driver, Roopesh (40), suffered severe injuries and is being treated, while his wife, Suchitra (33), sustained minor injuries.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm