ಬ್ರೇಕಿಂಗ್ ನ್ಯೂಸ್
14-10-24 02:35 pm Mangalore Correspondent ಕರಾವಳಿ
ಉಳ್ಳಾಲ, ಅ.14: ಮನೆಯಂಗಳದ ಬಾವಿಯಲ್ಲಿ ವೃದ್ಧ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದ್ದು ಅಸೌಖ್ಯದಿಂದಾಗಿ ಮನನೊಂದು ವೃದ್ಧೆ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕುಜುಮಗದ್ದೆಯಲ್ಲಿ ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ವಾರಿಜ (68) ಸಾವನ್ನಪ್ಪಿದ ಮಹಿಳೆ. ವಾರಿಜ ಅವರ ಪತಿ ಸಂಜೀವ ಭಂಡಾರಿ ಅವರು ಎರಡು ವರುಷದ ಹಿಂದೆ ಸಾವನ್ನಪ್ಪಿದ್ದರು. ಅವರ ಏಕೈಕ ಪುತ್ರನಿಗೆ ಕಳೆದ ವರುಷವಷ್ಟೆ ಮದುವೆಯಾಗಿತ್ತು. ನಿನ್ನೆ ಸಂಜೆ ವಾರಿಜ ಅವರು ವಾಕಿಂಗ್ ಮಾಡಿ ಊಟ ಮಾಡಿ ಮಲಗಿದ್ದರಂತೆ. ಇಂದು ಬೆಳಗ್ಗೆ ವಾರಿಜ ಅವರು ಮನೆಯೊಳಗೆ ಕಾಣದಿದ್ದಾಗ ಮನೆ ಮಂದಿ ಹುಡುಕಾಡಿದ್ದು ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಸುತ್ತ ಕಟ್ಟೆ ಇರುವ ಬಾವಿಯಾಗಿದ್ದು ಕಾಲು ಜಾರಿ ಬಿದ್ದಿರುವ ಸಾಧ್ಯತೆ ಕಡಿಮೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರ ಸಾವು
ಅಕ್ಟೋಬರ್ 5 ರಂದು ಬೆಳಗ್ಗೆ ಕೊಲ್ಯ, ಕುಜುಮಗದ್ದೆಯ ನಿವಾಸಿ ಅವಿವಾಹಿತ ಯುವಕ ಪ್ರಸಾದ್ (44) ಎಂಬವರು ಮನೆಯ ಪಕ್ಕದ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅ.4ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋಗಿದ್ದ ಪ್ರಸಾದ್ ಮತ್ತೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಖಿನ್ನತೆಯಿಂದ ಆತ್ಮಹತ್ಯೆ ನಡೆಸಿರೋದಾಗಿ ಶಂಕಿಸಲಾಗಿತ್ತು. ಹತ್ತು ದಿನಗಳ ಬಳಿಕ ಅದೇ ಪರಿಸರದಲ್ಲಿ ಬಾವಿಗೆ ಬಿದ್ದು ಮತ್ತೋರ್ವ ವೃದ್ಧೆ ಸಾವನ್ನಪ್ಪಿದ್ದಾರೆ.
68 year Old woman body found inside well at ullal in Mangalore. The deceased has been identified as Varija. Varija wasn't keeping well in her health conditions.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 12:03 pm
HK News Desk
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
Jeppinamogaru, Accident, Mangalore: ಕುಡಿದ ನಶೆ...
20-06-25 07:10 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm