ಬ್ರೇಕಿಂಗ್ ನ್ಯೂಸ್
14-10-24 02:35 pm Mangalore Correspondent ಕರಾವಳಿ
ಉಳ್ಳಾಲ, ಅ.14: ಮನೆಯಂಗಳದ ಬಾವಿಯಲ್ಲಿ ವೃದ್ಧ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದ್ದು ಅಸೌಖ್ಯದಿಂದಾಗಿ ಮನನೊಂದು ವೃದ್ಧೆ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕುಜುಮಗದ್ದೆಯಲ್ಲಿ ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ವಾರಿಜ (68) ಸಾವನ್ನಪ್ಪಿದ ಮಹಿಳೆ. ವಾರಿಜ ಅವರ ಪತಿ ಸಂಜೀವ ಭಂಡಾರಿ ಅವರು ಎರಡು ವರುಷದ ಹಿಂದೆ ಸಾವನ್ನಪ್ಪಿದ್ದರು. ಅವರ ಏಕೈಕ ಪುತ್ರನಿಗೆ ಕಳೆದ ವರುಷವಷ್ಟೆ ಮದುವೆಯಾಗಿತ್ತು. ನಿನ್ನೆ ಸಂಜೆ ವಾರಿಜ ಅವರು ವಾಕಿಂಗ್ ಮಾಡಿ ಊಟ ಮಾಡಿ ಮಲಗಿದ್ದರಂತೆ. ಇಂದು ಬೆಳಗ್ಗೆ ವಾರಿಜ ಅವರು ಮನೆಯೊಳಗೆ ಕಾಣದಿದ್ದಾಗ ಮನೆ ಮಂದಿ ಹುಡುಕಾಡಿದ್ದು ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಸುತ್ತ ಕಟ್ಟೆ ಇರುವ ಬಾವಿಯಾಗಿದ್ದು ಕಾಲು ಜಾರಿ ಬಿದ್ದಿರುವ ಸಾಧ್ಯತೆ ಕಡಿಮೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರ ಸಾವು
ಅಕ್ಟೋಬರ್ 5 ರಂದು ಬೆಳಗ್ಗೆ ಕೊಲ್ಯ, ಕುಜುಮಗದ್ದೆಯ ನಿವಾಸಿ ಅವಿವಾಹಿತ ಯುವಕ ಪ್ರಸಾದ್ (44) ಎಂಬವರು ಮನೆಯ ಪಕ್ಕದ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅ.4ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋಗಿದ್ದ ಪ್ರಸಾದ್ ಮತ್ತೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಖಿನ್ನತೆಯಿಂದ ಆತ್ಮಹತ್ಯೆ ನಡೆಸಿರೋದಾಗಿ ಶಂಕಿಸಲಾಗಿತ್ತು. ಹತ್ತು ದಿನಗಳ ಬಳಿಕ ಅದೇ ಪರಿಸರದಲ್ಲಿ ಬಾವಿಗೆ ಬಿದ್ದು ಮತ್ತೋರ್ವ ವೃದ್ಧೆ ಸಾವನ್ನಪ್ಪಿದ್ದಾರೆ.
68 year Old woman body found inside well at ullal in Mangalore. The deceased has been identified as Varija. Varija wasn't keeping well in her health conditions.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm