ಬ್ರೇಕಿಂಗ್ ನ್ಯೂಸ್
14-10-24 02:35 pm Mangalore Correspondent ಕರಾವಳಿ
ಉಳ್ಳಾಲ, ಅ.14: ಮನೆಯಂಗಳದ ಬಾವಿಯಲ್ಲಿ ವೃದ್ಧ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದ್ದು ಅಸೌಖ್ಯದಿಂದಾಗಿ ಮನನೊಂದು ವೃದ್ಧೆ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕುಜುಮಗದ್ದೆಯಲ್ಲಿ ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ವಾರಿಜ (68) ಸಾವನ್ನಪ್ಪಿದ ಮಹಿಳೆ. ವಾರಿಜ ಅವರ ಪತಿ ಸಂಜೀವ ಭಂಡಾರಿ ಅವರು ಎರಡು ವರುಷದ ಹಿಂದೆ ಸಾವನ್ನಪ್ಪಿದ್ದರು. ಅವರ ಏಕೈಕ ಪುತ್ರನಿಗೆ ಕಳೆದ ವರುಷವಷ್ಟೆ ಮದುವೆಯಾಗಿತ್ತು. ನಿನ್ನೆ ಸಂಜೆ ವಾರಿಜ ಅವರು ವಾಕಿಂಗ್ ಮಾಡಿ ಊಟ ಮಾಡಿ ಮಲಗಿದ್ದರಂತೆ. ಇಂದು ಬೆಳಗ್ಗೆ ವಾರಿಜ ಅವರು ಮನೆಯೊಳಗೆ ಕಾಣದಿದ್ದಾಗ ಮನೆ ಮಂದಿ ಹುಡುಕಾಡಿದ್ದು ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಸುತ್ತ ಕಟ್ಟೆ ಇರುವ ಬಾವಿಯಾಗಿದ್ದು ಕಾಲು ಜಾರಿ ಬಿದ್ದಿರುವ ಸಾಧ್ಯತೆ ಕಡಿಮೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರ ಸಾವು
ಅಕ್ಟೋಬರ್ 5 ರಂದು ಬೆಳಗ್ಗೆ ಕೊಲ್ಯ, ಕುಜುಮಗದ್ದೆಯ ನಿವಾಸಿ ಅವಿವಾಹಿತ ಯುವಕ ಪ್ರಸಾದ್ (44) ಎಂಬವರು ಮನೆಯ ಪಕ್ಕದ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅ.4ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋಗಿದ್ದ ಪ್ರಸಾದ್ ಮತ್ತೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಖಿನ್ನತೆಯಿಂದ ಆತ್ಮಹತ್ಯೆ ನಡೆಸಿರೋದಾಗಿ ಶಂಕಿಸಲಾಗಿತ್ತು. ಹತ್ತು ದಿನಗಳ ಬಳಿಕ ಅದೇ ಪರಿಸರದಲ್ಲಿ ಬಾವಿಗೆ ಬಿದ್ದು ಮತ್ತೋರ್ವ ವೃದ್ಧೆ ಸಾವನ್ನಪ್ಪಿದ್ದಾರೆ.
68 year Old woman body found inside well at ullal in Mangalore. The deceased has been identified as Varija. Varija wasn't keeping well in her health conditions.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
17-03-25 11:29 am
Mangalore Correspondent
UT Khader, Mangalore, Tulu Academy: ತುಳು ಕಲಿತ...
16-03-25 10:55 pm
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm