ಬ್ರೇಕಿಂಗ್ ನ್ಯೂಸ್
15-10-24 05:00 pm Mangalore Correspondent ಕರಾವಳಿ
ಉಳ್ಳಾಲ, ಅ.15: ಶೃಂಗೇರಿ ಸೇರಿದಂತೆ ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಬಂದಾಗ ಮನಸ್ಸಿಗೆ ತುಂಬಾನೇ ನೆಮ್ಮದಿ ಸಿಗುತ್ತದೆ. ಹಾಗಾಗಿ ಕರಾವಳಿಗೆ ಬಂದಾಗಲೆಲ್ಲ ಇಲ್ಲಿನ ಕಾರಣಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಜೀವನ ಚೆನ್ನಾಗಿರಲಿ ಎಂದು ಪ್ರಾರ್ಥಿಸುತ್ತೇನೆಂದು ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಸೋಮವಾರ ಶಿವರಾಜ್ ಕುಮಾರ್ , ಗೀತಾ ದಂಪತಿ ಭೇಟಿ ನೀಡಿ ಅಜ್ಜನ ಕಟ್ಟೆಗೆ ಪ್ರಾರ್ಥನೆ ಸಲ್ಲಿಸಿದರು.





ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ನಟ ಶಿವರಾಜ್ ಕುಮಾರ್ ಅವರು ಶೃಂಗೇರಿ ಮಠ ಸೇರಿದಂತೆ ಕರಾವಳಿಯ ಉಡುಪಿ ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರ, ವನದೇವತೆ, ಕೊರಗಜ್ಜನ ಕ್ಷೇತ್ರಗಳನ್ನ ಸಂದರ್ಶಿಸುತ್ತಾ ಬಂದಿದ್ದೇನೆ. ಎಲ್ಲಾ ಸಾನಿಧ್ಯಗಳಿಗೂ ಭೇಟಿ ಕೊಟ್ಟಾಗ ಮನಸ್ಸಿಗೆ ತುಂಬಾ ನೆಮ್ಮದಿ ಸಿಗುತ್ತದೆ. ಸದೃಢ ನಂಬಿಕೆ ಜೊತೆ ಜೀವನ ಚೆನ್ನಾಗಿರಲಿ ಎಂದು ಭಕ್ತಿಯಿಂದ ಪ್ರಾರ್ಥಿಸಲು ಕೊರಗಜ್ಜನ ಕ್ಷೇತ್ರಕ್ಕೆ ಬಂದಿದ್ದೇನೆ. ನ.15ರ ಆಸುಪಾಸಿನಲ್ಲಿ ಅರ್ಜುನ್ ಜನ್ಯ ನಿರ್ದೇಶಿಸಿರುವ ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ. ಶೆಟ್ಟಿ ಜತೆ ತಾನು ನಟಿಸಿರುವ ಫಾರ್ಟಿ ಫೈವ್ ಚಿತ್ರ ತೆರೆ ಕಾಣಲಿದೆ. ಮತ್ತೊಂದು ಚಿತ್ರ ನಿರ್ಮಾಣದ ಬಗ್ಗೆಯೂ ಸಿದ್ಧತೆ ನಡೆದಿದ್ದು ಶೀಘ್ರವೇ ಪ್ರಾಜೆಕ್ಟ್ ಆರಂಭವಾಗಲಿದೆ ಎಂದರು.
ಈ ವೇಳೆ ಚಿತ್ರ ನಿರ್ಮಾಪಕರಾದ ಶ್ರೀಕಾಂತ್, ರಾಜೇಶ್ ಭಟ್, ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದು ಶಿವರಾಜ್ ಕುಮಾರ್ ದಂಪತಿಯನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
Renowned actor Shivaraj Kumar, accompanied by his wife Geeta, visited Kuthar Koragajja’s birthplace in Dekkad, Kuthar Mangalore and interacted with the press. The couple performed a special puja, seeking blessings for the success of the actor’s upcoming film, 'Bhairathi Ranagal', set to release statewide in Karnataka on November 15 under the Geetha Pictures banner.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm