ಬ್ರೇಕಿಂಗ್ ನ್ಯೂಸ್
16-10-24 03:30 pm Mangalore Correspondent ಕರಾವಳಿ
ಮಂಗಳೂರು, ಅ.16: ದೀಪಾವಳಿ ಸಂದರ್ಭದಲ್ಲಿ ಮನೆಯವರೆಲ್ಲರೂ ಸೇರಿ ತಯಾರಿಸುತ್ತಿದ್ದ ಗೂಡುದೀಪದ ಜಾಗವನ್ನು ಅಂಗಡಿಯಲ್ಲಿ ಸಿಗುವ ಗೂಡು ದೀಪಗಳು ಆವರಿಸಿಕೊಂಡಿವೆ. ಗೂಡುದೀಪ ರಚಿಸುವ ಕಲೆಯನ್ನು ಉಳಿಸುವ ಜೊತೆಗೆ ಮಕ್ಕಳಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 25 ವರ್ಷಗಳ ಹಿಂದೆ 'ನಮ್ಮ ಕುಡ್ಲ' ವಾಹಿನಿ ಗೂಡುದೀಪ ಸ್ಪರ್ಧೆಯನ್ನು ಆಯೋಜನೆ ಮಾಡಲು ಆರಂಭಿಸಿತ್ತು. ಈ ಬಾರಿ 25ನೇ ವರ್ಷದ ಗೂಡುದೀಪದ ಸ್ಪರ್ಧೆ ಅ.30ರಂದು ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಆಯೋಜಿಸಲಾಗಿದೆ.
ಸಾಂಪ್ರದಾಯಿಕ, ಆಧುನಿಕ ಮತ್ತು ಪ್ರತಿಕೃತಿ ಎಂಬ ಮೂರು ವಿಭಾಗದಲ್ಲಿ ಗೂಡುದೀಪ ಸ್ಪರ್ಧೆ ನಡೆಸಲಾಗುತ್ತಿದೆ. ಈ ಮೂರು ವಿಭಾಗದಲ್ಲಿ ನಡೆಯುವ ಗೂಡುದೀಪ ಸ್ಪರ್ಧೆಯಲ್ಲಿ ಸ್ಪರ್ಧಿಗಳು ಉತ್ತಮ ರೀತಿಯಲ್ಲಿ ಭಾಗವಹಿಸಿದ್ದಾರೆ. ಈ ಬಾರಿಯೂ ಮೂರೂ ವಿಭಾಗದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸ್ಪರ್ಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಗೂಡುದೀಪ ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ಕೆಲವೊಂದು ನಿಯಮಗಳಿದ್ದು, ಅವುಗಳನ್ನು ಪಾಲಿಸಬೇಕಾಗುತ್ತದೆ.
ಗೂಡುದೀಪ ಸ್ಪರ್ಧೆ ನಿಯಮಗಳು
ಸಾಂಪ್ರದಾಯಿಕ ವಿಭಾಗದಲ್ಲಿ ಬಣ್ಣದ ಕಾಗದ, ಗ್ಲಾಸ್ ಪೇಪರ್ ಅಥವಾ ಬಟ್ಟೆಯಿಂದ ಗೂಡುದೀಪ ತಯಾರು ಮಾಡಿರಬೇಕು. ಗೂಡುದೀಪಕ್ಕೆ ಬಾಲ ಇರಬೇಕು ಹಾಗೂ ಅದು ನೇತು ಹಾಕುವಂತಿರಬೇಕು. ಗೂಡುದೀಪದ ಒಳಗಿನ ಬೆಳಕು ಹೊರಗೆ ಕಾಣುವಂತೆ ತಯಾರಿಸಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಅಥವಾ ಯಾವುದೇ ಆಧುನಿಕ ಪರಿಕರಗಳನ್ನು ಬಳಸುವಂತಿಲ್ಲ. ಬೇಗಡೆಯನ್ನು ಉಪಯೋಗಿಸಲು ಅವಕಾಶ ಇದೆ. ಗೂಡುದೀಪ ಶುದ್ಧವಾಗಿ ಸಾಂಪ್ರದಾಯಿಕವಾಗಿಯೇ ಇರಬೇಕು.
ಆಧುನಿಕ ವಿಭಾಗದಲ್ಲಿ ಗೂಡುದೀಪ ರಚನೆಗೆ ಯಾವುದೇ ಆಧುನಿಕ ಪರಿಕರಗಳನ್ನು ಬಳಸಬಹುದಾಗಿದೆ. ಆದರೆ, ಸಾಂಪ್ರದಾಯಿಕ ಗೂಡುದೀಪದಂತೆ ಇದೂ ಕೂಡ ನೇತು ಹಾಕುವಂತೆ ಇರಬೇಕು. ಗೂಡುದೀಪದಲ್ಲಿ ಗೂಡು ಇರುವುದು ಕಡ್ಡಾಯವಾಗಿದ್ದು, ಪ್ರತಿಕೃತಿಯ ಹೋಲಿಕೆ ಇರಬಾರದು.
ಪ್ರತಿಕೃತಿ ವಿಭಾಗದಲ್ಲಿ ಯಾವುದೇ ಕಲಾತ್ಮಕ ರಚನೆಗೆ ಅವಕಾಶವಿದೆ. ಯಾವುದೇ ಆಧುನಿಕ ಪರಿಕರಗಳನ್ನು ಇದರಲ್ಲಿ ಬಳಕೆ ಮಾಡಬಹುದಾಗಿದೆ. ಆದಷ್ಟು ಹೊಸತನವನ್ನು ಅಳವಡಿಸಿಕೊಂಡು ಪ್ರತಿಕೃತಿಯ ರಚನೆ ಇರಬೇಕು.
Hallowed precincts of Sri Kshetra Gokarnanatha will come alive to ‘gududeepas’ in different hues when the 25th annual ‘Gududeepa Pantha’ organised by Namma Kudla, local Tulu TV news channel is held at Kudroli on October 30th
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am