ಬ್ರೇಕಿಂಗ್ ನ್ಯೂಸ್
16-10-24 08:19 pm Mangalore Correspondent ಕರಾವಳಿ
ಪುತ್ತೂರು, ಅ.16: ಬಿಲ್ಲವ ಸಮಾಜದ 1 ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು ಎಂಬುದಾಗಿ ಪಂಜ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರು ಜಾಲತಾಣದಲ್ಲಿ ವಿಕೃತ ಟೀಕೆ ಮಾಡಿದ್ದು ಇವರನ್ನು ಸರ್ಕಾರದ ಸೇವೆಯಿಂದ ಕೂಡಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಹಿಂದು ಜಾಗರಣ ವೇದಿಕೆ ಪೊಲೀಸರಿಗೆ ದೂರು ನೀಡಿದೆ.
ಹಿಂದೂ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದು ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆಯ ಮುಖಂಡರು ಬೆಳ್ಳಾರೆ ಠಾಣೆಯಲ್ಲಿ ಮತ್ತು ಮಂಗಳೂರು ಅರಣ್ಯ ಅಧಿಕಾರಿ ಅಂತೋಣಿ ಮರಿಯಪ್ಪ ಇವರಿಗೆ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಿದ್ದಾರೆ. ನನ್ನ ಬಳಿ ಇದಕ್ಕೆ ಹತ್ತು ಸಾವಿರ ದಾಖಲೆ ಇದೆ. ಹಿಂದುತ್ವದ ಹುಡುಗರು ಇವರನ್ನು ಸೂಳೆಯರಾಗಿ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ವೇಳೆ ಅವರನ್ನು ಮರದಡಿಯಲ್ಲಿ ಮಲಗಿಸುತ್ತಾರೆ ಎಂದು ಹೇಳಿ ಅವಮಾನ ಮಾಡಿದ್ದಾರೆ. ಅಪಘಾತವಾದಲ್ಲಿ ಮುಸ್ಲಿಂ ಯುವಕರು ಸಹಾಯಕ್ಕೆ ಬರುತ್ತಾರೆ. ಹಿಂದು ಹುಡುಗರು ಫೋಟೊ ತೆಗೆದು ಹಂಚುತ್ತಾರೆ ಇತ್ಯಾದಿಯಾಗಿ ಹಿಂದು ಧರ್ಮದವರನ್ನು ಅವಾಚ್ಯವಾಗಿ ಮಾತನಾಡಿದ್ದಾರೆ.
ಈತ ಈ ಹಿಂದೆಯೂ ಇಂತಹ ವಿಕೃತ ಮನಸ್ಥಿತಿಯಿಂದ ಹಿಂದುಗಳ ಭಜನೆ ಬಗ್ಗೆ ಟೀಕೆ ಮಾಡಿ ಸೇವೆಯಿಂದ ಅಮಾನತು ಆಗಿದ್ದರು. ಆನಂತರ, ಸೇವೆಗೆ ಸೇರಿದ್ದ ಸಂಜೀವ ಪೂಜಾರಿ ಸಮಯದಲ್ಲಿ ಮತ್ತೆ ಹಳೆ ಚಾಳಿ ಮುಂದುವರಿಸಿದ್ದಾರೆ. ಇವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಹಿಂಜಾವೇ ಸುಳ್ಯ ತಾಲೂಕು ಸಂಯೋಜಕ ಸಚಿನ್ ವಳಲಂಬೆ ಮತ್ತಿತರರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Derogatory messages on social media, Hindu Jagrana vedike demands action against deputy range forest officer Sanjeeva Poojari. In 2022 Sanjeeva Poojari Kaniyooru, deputy range forest officer, was accused of spreading derogatory messages on Facebook.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am