ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.
ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am