ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.



ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm