ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.



ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 11:15 pm
Mangalore Correspondent
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm