ಬ್ರೇಕಿಂಗ್ ನ್ಯೂಸ್
08-08-20 11:43 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 8: ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ನೆರೆ ಕಾಣಿಸಿಕೊಂಡಿದ್ದು ಹಲವಾರು ಮನೆಗಳು ಮತ್ತು ಕೃಷಿ ಭೂಮಿ ಮುಳುಗಡೆಯಾಗಿದೆ.
ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಾನ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ 30 ಮೀಟರ್ ಆಗಿದ್ದು, ಇದೀಗ ಅದಕ್ಕಿಂತಲೂ ಹೆಚ್ಚಿನ ಎತ್ತರದಲ್ಲಿ ನೀರು ಹರಿಯುತ್ತಿದೆ. ನೀರಿನ ಹೆಚ್ಚಳದಿಂದಾಗಿ ಉಪ್ಪಿನಂಗಡಿ, ನಟ್ಟಿಬೈಲು, ನೆಲ್ಯಾಡಿ ಮೊದಲಾದ ಕಡೆ ಕೃಷಿಭೂಮಿಗೆ ನೀರು ನುಗ್ಗಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಇದೀಗ ನದಿ 9 ಮೀಟರ್ ಗೂ ಹೆಚ್ಚಿನ ಎತ್ತರದಲ್ಲಿ ಹರಿಯುತ್ತಿದೆ. ಇದರಿಂದಾಗಿ ಪಾಣೆಮಂಗಳೂರು, ಗೂಡಿನ ಬಳಿ ಮೊದಲಾದ ಕಡೆ ನೀರು ವಸತಿ ಪ್ರದೇಶಗಳಿಗೆ ನುಗ್ಗಿದ್ದು ಕೃತಕ ನೆರೆ ಉಂಟಾಗಿದೆ.

ಕುಮಾರಧಾರಾ ನದಿಯಲ್ಲಿ ನೀರಿನ ಹರಿವಿನಲ್ಲಿ ಕೊಂಚ ಇಳಿಮುಖವಾಗಿದ್ದರೂ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಆರನೇ ದಿನವೂ ಮುಳುಗಡೆಯಾಗಿದೆ. ಚಾರ್ಮಾಡಿ ಘಾಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರುವ ಹಿನ್ನಲೆಯಲ್ಲಿ ಚಾರ್ಮಾಡಿಯ ಮೃತ್ಯುಂಜಯ ಹೊಳೆಯಲ್ಲೂ ಪ್ರವಾಹದ ರೀತಿ ನೀರು ಹರಿಯಲಾರಂಭಿಸಿದೆ. ಕೊಳಂಬೆ, ಚಾರ್ಮಾಡಿ ಪ್ರದೇಶಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿವೆ. ಕೊಳಂಬೆ ಪ್ರದೇಶದಲ್ಲಿ ಸುಮಾರು 15 ಕ್ಕೂ ಮಿಕ್ಕಿದ ಮನೆಗಳು ಜಲಾವೃತಗೊಂಡಿದೆ. ಕಳೆದ ಬಾರಿ ರೌದ್ರ ನರ್ತನ ತೋರಿದ್ಧ ಮೃತ್ಯುಂಜಯ ಹೊಳೆ ಹರಿವು ಅಲ್ಲಿನ ಜನರಲ್ಲಿ ಆತಂಕ ಹುಟ್ಟಿಸಿದೆ.
Video:
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
23-03-26 05:36 pm
HK News Staffer
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm