ಬ್ರೇಕಿಂಗ್ ನ್ಯೂಸ್
21-10-24 08:38 pm Mangalore Correspondent ಕರಾವಳಿ
ಮಂಗಳೂರು, ಅ.21: ಕೊಬ್ಬರಿ, ತೆಂಗಿನ ಕಾಯಿಗೆ ಈ ಬಾರಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ. ದೀಪಾವಳಿ ನಂತರ ಇನ್ನೂ ಬೆಲೆ ಹೆಚ್ಚಲಿದ್ದು ತೆಂಗಿನ ಕಾಯಿ ಕೇಜಿಗೆ 60 ರಿಂದ 70 ರೂಪಾಯಿಗೆ ಏರಲಿದೆ. ಬೆಳೆಗಾರರು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಬೆಲೆ ಪಡೆಯಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ಉತ್ಪಾದಕ ಮಾರಾಟ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿದ್ದಾರೆ.
ಈ ಬಾರಿ ಮಳೆ ಹೆಚ್ಚಿದ್ದರಿಂದ ತೆಂಗು ಕೃಷಿ ಇಳುವರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಬೆಳೆಯೂ ಕಡಿಮೆಯಾಗಿದ್ದು ಇದರ ಪರಿಣಾಮ ಖಚಿತವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಳನೀರಿಗೆ 60 ರೂ.ನಷ್ಟು ದರ ಏರಿದ್ದು ಬೆಳೆಗಾರರಿಂದ 40-50 ರೂ.ಗೆ ಖರೀದಿಯಾಗುತ್ತಿದೆ. ಇದರಿಂದಾಗಿ ಎಳನೀರನ್ನು ಕೂಡ ಹೆಚ್ಚಾಗಿ ರೈತರು ಮಾರಾಟ ಮಾಡುತ್ತಿದ್ದಾರೆ. ಅಧಿಕ ಪೋಷಕಾಂಶ ಇರುವ ಎಳನೀರಿಗೆ ದರ ಏರಿಕೆಯಾಗುತ್ತಿರುವುದು ಮತ್ತು ಎಳನೀರು ಮಾರಾಟಕ್ಕೆ ರೈತರು ಒಲವು ತೋರುತ್ತಿರುವುದು ಮಾರುಕಟ್ಟೆ ದೃಷ್ಟಿಯಿಂದ ಉತ್ತಮ ಲಕ್ಷಣ. ಇದು ತೆಂಗು ಕೃಷಿಯಲ್ಲಿ ಆಗಿರುವ ಉತ್ತಮ ಬೆಳವಣಿಗೆಯೂ ಹೌದು. ತೆಂಗು ಕೂಡ ಪರ್ಯಾಯ ಆಹಾರ ಬೆಳೆಯಾಗುತ್ತಿದ್ದು ಇದೆಲ್ಲದರ ಪರಿಣಾಮ ಕೃಷಿಕರ ಪಾಲಿಗೆ ಲಾಭದಾಯಕ ಆಗಲಿದೆ. ಇದರಿಂದ ತೆಂಗು ಮತ್ತು ಕೊಬ್ಬರಿ ಕೇಜಿಗೆ ಬೆಲೆ ಹೆಚ್ಚುವುದು ಖಚಿತ.
ದೀಪಾವಳಿ ನಂತರ ತೆಂಗಿನಕಾಯಿ ಕೆಜಿಗೆ 60ರಿಂದ 70 ರೂ.ನಷ್ಟು ಆಗುವ ಸಾಧ್ಯತೆಯಿದೆ. ಈಗಲೇ ಸಗಟು ಮಾರುಕಟ್ಟೆಯಲ್ಲಿ 55-60 ರು. ತೆಂಗಿನ ಕಾಯಿ ದರ ಇದೆ. ತೆಂಗು ಉತ್ಪಾದಕ ಸಂಸ್ಥೆಯಿಂದ ಬೆಳೆಗಾರರಿಂದ 40-45 ರೂ.ಗೆ ತೆಂಗಿನ ಕಾಯಿ ಖರೀದಿ ಮಾಡಲಾಗುತ್ತಿದೆ. ಈ ದರ ಖಚಿತವಾಗಿಯೂ ದೀಪಾವಳಿ ಬಳಿಕ ಹೆಚ್ಚಲಿದೆ. ಹೀಗಾಗಿ ತೆಂಗು ಬೆಳೆಗಾರರು ದುಡುಕದೆ ಉತ್ತಮ ಇಳುವರಿ ಬರುವ ವರೆಗೆ ತಾಳ್ಮೆ ವಹಿಸಬೇಕು. ತೆಂಗು ದರ ಏರಿಕೆಯಾದರೆ ಕೃಷಿಕರ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಕುಸುಮಾಧರ ಅವರು ಪ್ರಕಟಣೆಯಲ್ಲಿ ರೈತರಿಗೆ ಸಲಹೆ ಮಾಡಿದ್ದಾರೆ.
Coconut price to increase from 60 to 70 rupees per kg says Coconut Producers Association President Kusumadhar in Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm