ಬ್ರೇಕಿಂಗ್ ನ್ಯೂಸ್
21-10-24 08:38 pm Mangalore Correspondent ಕರಾವಳಿ
ಮಂಗಳೂರು, ಅ.21: ಕೊಬ್ಬರಿ, ತೆಂಗಿನ ಕಾಯಿಗೆ ಈ ಬಾರಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ. ದೀಪಾವಳಿ ನಂತರ ಇನ್ನೂ ಬೆಲೆ ಹೆಚ್ಚಲಿದ್ದು ತೆಂಗಿನ ಕಾಯಿ ಕೇಜಿಗೆ 60 ರಿಂದ 70 ರೂಪಾಯಿಗೆ ಏರಲಿದೆ. ಬೆಳೆಗಾರರು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಬೆಲೆ ಪಡೆಯಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ಉತ್ಪಾದಕ ಮಾರಾಟ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿದ್ದಾರೆ.
ಈ ಬಾರಿ ಮಳೆ ಹೆಚ್ಚಿದ್ದರಿಂದ ತೆಂಗು ಕೃಷಿ ಇಳುವರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಬೆಳೆಯೂ ಕಡಿಮೆಯಾಗಿದ್ದು ಇದರ ಪರಿಣಾಮ ಖಚಿತವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಳನೀರಿಗೆ 60 ರೂ.ನಷ್ಟು ದರ ಏರಿದ್ದು ಬೆಳೆಗಾರರಿಂದ 40-50 ರೂ.ಗೆ ಖರೀದಿಯಾಗುತ್ತಿದೆ. ಇದರಿಂದಾಗಿ ಎಳನೀರನ್ನು ಕೂಡ ಹೆಚ್ಚಾಗಿ ರೈತರು ಮಾರಾಟ ಮಾಡುತ್ತಿದ್ದಾರೆ. ಅಧಿಕ ಪೋಷಕಾಂಶ ಇರುವ ಎಳನೀರಿಗೆ ದರ ಏರಿಕೆಯಾಗುತ್ತಿರುವುದು ಮತ್ತು ಎಳನೀರು ಮಾರಾಟಕ್ಕೆ ರೈತರು ಒಲವು ತೋರುತ್ತಿರುವುದು ಮಾರುಕಟ್ಟೆ ದೃಷ್ಟಿಯಿಂದ ಉತ್ತಮ ಲಕ್ಷಣ. ಇದು ತೆಂಗು ಕೃಷಿಯಲ್ಲಿ ಆಗಿರುವ ಉತ್ತಮ ಬೆಳವಣಿಗೆಯೂ ಹೌದು. ತೆಂಗು ಕೂಡ ಪರ್ಯಾಯ ಆಹಾರ ಬೆಳೆಯಾಗುತ್ತಿದ್ದು ಇದೆಲ್ಲದರ ಪರಿಣಾಮ ಕೃಷಿಕರ ಪಾಲಿಗೆ ಲಾಭದಾಯಕ ಆಗಲಿದೆ. ಇದರಿಂದ ತೆಂಗು ಮತ್ತು ಕೊಬ್ಬರಿ ಕೇಜಿಗೆ ಬೆಲೆ ಹೆಚ್ಚುವುದು ಖಚಿತ.
ದೀಪಾವಳಿ ನಂತರ ತೆಂಗಿನಕಾಯಿ ಕೆಜಿಗೆ 60ರಿಂದ 70 ರೂ.ನಷ್ಟು ಆಗುವ ಸಾಧ್ಯತೆಯಿದೆ. ಈಗಲೇ ಸಗಟು ಮಾರುಕಟ್ಟೆಯಲ್ಲಿ 55-60 ರು. ತೆಂಗಿನ ಕಾಯಿ ದರ ಇದೆ. ತೆಂಗು ಉತ್ಪಾದಕ ಸಂಸ್ಥೆಯಿಂದ ಬೆಳೆಗಾರರಿಂದ 40-45 ರೂ.ಗೆ ತೆಂಗಿನ ಕಾಯಿ ಖರೀದಿ ಮಾಡಲಾಗುತ್ತಿದೆ. ಈ ದರ ಖಚಿತವಾಗಿಯೂ ದೀಪಾವಳಿ ಬಳಿಕ ಹೆಚ್ಚಲಿದೆ. ಹೀಗಾಗಿ ತೆಂಗು ಬೆಳೆಗಾರರು ದುಡುಕದೆ ಉತ್ತಮ ಇಳುವರಿ ಬರುವ ವರೆಗೆ ತಾಳ್ಮೆ ವಹಿಸಬೇಕು. ತೆಂಗು ದರ ಏರಿಕೆಯಾದರೆ ಕೃಷಿಕರ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಕುಸುಮಾಧರ ಅವರು ಪ್ರಕಟಣೆಯಲ್ಲಿ ರೈತರಿಗೆ ಸಲಹೆ ಮಾಡಿದ್ದಾರೆ.
Coconut price to increase from 60 to 70 rupees per kg says Coconut Producers Association President Kusumadhar in Mangalore.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am