ಬ್ರೇಕಿಂಗ್ ನ್ಯೂಸ್
21-10-24 08:38 pm Mangalore Correspondent ಕರಾವಳಿ
ಮಂಗಳೂರು, ಅ.21: ಕೊಬ್ಬರಿ, ತೆಂಗಿನ ಕಾಯಿಗೆ ಈ ಬಾರಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ. ದೀಪಾವಳಿ ನಂತರ ಇನ್ನೂ ಬೆಲೆ ಹೆಚ್ಚಲಿದ್ದು ತೆಂಗಿನ ಕಾಯಿ ಕೇಜಿಗೆ 60 ರಿಂದ 70 ರೂಪಾಯಿಗೆ ಏರಲಿದೆ. ಬೆಳೆಗಾರರು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಬೆಲೆ ಪಡೆಯಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ಉತ್ಪಾದಕ ಮಾರಾಟ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿದ್ದಾರೆ.
ಈ ಬಾರಿ ಮಳೆ ಹೆಚ್ಚಿದ್ದರಿಂದ ತೆಂಗು ಕೃಷಿ ಇಳುವರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಬೆಳೆಯೂ ಕಡಿಮೆಯಾಗಿದ್ದು ಇದರ ಪರಿಣಾಮ ಖಚಿತವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಳನೀರಿಗೆ 60 ರೂ.ನಷ್ಟು ದರ ಏರಿದ್ದು ಬೆಳೆಗಾರರಿಂದ 40-50 ರೂ.ಗೆ ಖರೀದಿಯಾಗುತ್ತಿದೆ. ಇದರಿಂದಾಗಿ ಎಳನೀರನ್ನು ಕೂಡ ಹೆಚ್ಚಾಗಿ ರೈತರು ಮಾರಾಟ ಮಾಡುತ್ತಿದ್ದಾರೆ. ಅಧಿಕ ಪೋಷಕಾಂಶ ಇರುವ ಎಳನೀರಿಗೆ ದರ ಏರಿಕೆಯಾಗುತ್ತಿರುವುದು ಮತ್ತು ಎಳನೀರು ಮಾರಾಟಕ್ಕೆ ರೈತರು ಒಲವು ತೋರುತ್ತಿರುವುದು ಮಾರುಕಟ್ಟೆ ದೃಷ್ಟಿಯಿಂದ ಉತ್ತಮ ಲಕ್ಷಣ. ಇದು ತೆಂಗು ಕೃಷಿಯಲ್ಲಿ ಆಗಿರುವ ಉತ್ತಮ ಬೆಳವಣಿಗೆಯೂ ಹೌದು. ತೆಂಗು ಕೂಡ ಪರ್ಯಾಯ ಆಹಾರ ಬೆಳೆಯಾಗುತ್ತಿದ್ದು ಇದೆಲ್ಲದರ ಪರಿಣಾಮ ಕೃಷಿಕರ ಪಾಲಿಗೆ ಲಾಭದಾಯಕ ಆಗಲಿದೆ. ಇದರಿಂದ ತೆಂಗು ಮತ್ತು ಕೊಬ್ಬರಿ ಕೇಜಿಗೆ ಬೆಲೆ ಹೆಚ್ಚುವುದು ಖಚಿತ.
ದೀಪಾವಳಿ ನಂತರ ತೆಂಗಿನಕಾಯಿ ಕೆಜಿಗೆ 60ರಿಂದ 70 ರೂ.ನಷ್ಟು ಆಗುವ ಸಾಧ್ಯತೆಯಿದೆ. ಈಗಲೇ ಸಗಟು ಮಾರುಕಟ್ಟೆಯಲ್ಲಿ 55-60 ರು. ತೆಂಗಿನ ಕಾಯಿ ದರ ಇದೆ. ತೆಂಗು ಉತ್ಪಾದಕ ಸಂಸ್ಥೆಯಿಂದ ಬೆಳೆಗಾರರಿಂದ 40-45 ರೂ.ಗೆ ತೆಂಗಿನ ಕಾಯಿ ಖರೀದಿ ಮಾಡಲಾಗುತ್ತಿದೆ. ಈ ದರ ಖಚಿತವಾಗಿಯೂ ದೀಪಾವಳಿ ಬಳಿಕ ಹೆಚ್ಚಲಿದೆ. ಹೀಗಾಗಿ ತೆಂಗು ಬೆಳೆಗಾರರು ದುಡುಕದೆ ಉತ್ತಮ ಇಳುವರಿ ಬರುವ ವರೆಗೆ ತಾಳ್ಮೆ ವಹಿಸಬೇಕು. ತೆಂಗು ದರ ಏರಿಕೆಯಾದರೆ ಕೃಷಿಕರ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಕುಸುಮಾಧರ ಅವರು ಪ್ರಕಟಣೆಯಲ್ಲಿ ರೈತರಿಗೆ ಸಲಹೆ ಮಾಡಿದ್ದಾರೆ.
Coconut price to increase from 60 to 70 rupees per kg says Coconut Producers Association President Kusumadhar in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am