ಬ್ರೇಕಿಂಗ್ ನ್ಯೂಸ್
21-10-24 08:38 pm Mangalore Correspondent ಕರಾವಳಿ
ಮಂಗಳೂರು, ಅ.21: ಕೊಬ್ಬರಿ, ತೆಂಗಿನ ಕಾಯಿಗೆ ಈ ಬಾರಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ. ದೀಪಾವಳಿ ನಂತರ ಇನ್ನೂ ಬೆಲೆ ಹೆಚ್ಚಲಿದ್ದು ತೆಂಗಿನ ಕಾಯಿ ಕೇಜಿಗೆ 60 ರಿಂದ 70 ರೂಪಾಯಿಗೆ ಏರಲಿದೆ. ಬೆಳೆಗಾರರು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಬೆಲೆ ಪಡೆಯಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ಉತ್ಪಾದಕ ಮಾರಾಟ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿದ್ದಾರೆ.
ಈ ಬಾರಿ ಮಳೆ ಹೆಚ್ಚಿದ್ದರಿಂದ ತೆಂಗು ಕೃಷಿ ಇಳುವರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಬೆಳೆಯೂ ಕಡಿಮೆಯಾಗಿದ್ದು ಇದರ ಪರಿಣಾಮ ಖಚಿತವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಳನೀರಿಗೆ 60 ರೂ.ನಷ್ಟು ದರ ಏರಿದ್ದು ಬೆಳೆಗಾರರಿಂದ 40-50 ರೂ.ಗೆ ಖರೀದಿಯಾಗುತ್ತಿದೆ. ಇದರಿಂದಾಗಿ ಎಳನೀರನ್ನು ಕೂಡ ಹೆಚ್ಚಾಗಿ ರೈತರು ಮಾರಾಟ ಮಾಡುತ್ತಿದ್ದಾರೆ. ಅಧಿಕ ಪೋಷಕಾಂಶ ಇರುವ ಎಳನೀರಿಗೆ ದರ ಏರಿಕೆಯಾಗುತ್ತಿರುವುದು ಮತ್ತು ಎಳನೀರು ಮಾರಾಟಕ್ಕೆ ರೈತರು ಒಲವು ತೋರುತ್ತಿರುವುದು ಮಾರುಕಟ್ಟೆ ದೃಷ್ಟಿಯಿಂದ ಉತ್ತಮ ಲಕ್ಷಣ. ಇದು ತೆಂಗು ಕೃಷಿಯಲ್ಲಿ ಆಗಿರುವ ಉತ್ತಮ ಬೆಳವಣಿಗೆಯೂ ಹೌದು. ತೆಂಗು ಕೂಡ ಪರ್ಯಾಯ ಆಹಾರ ಬೆಳೆಯಾಗುತ್ತಿದ್ದು ಇದೆಲ್ಲದರ ಪರಿಣಾಮ ಕೃಷಿಕರ ಪಾಲಿಗೆ ಲಾಭದಾಯಕ ಆಗಲಿದೆ. ಇದರಿಂದ ತೆಂಗು ಮತ್ತು ಕೊಬ್ಬರಿ ಕೇಜಿಗೆ ಬೆಲೆ ಹೆಚ್ಚುವುದು ಖಚಿತ.
ದೀಪಾವಳಿ ನಂತರ ತೆಂಗಿನಕಾಯಿ ಕೆಜಿಗೆ 60ರಿಂದ 70 ರೂ.ನಷ್ಟು ಆಗುವ ಸಾಧ್ಯತೆಯಿದೆ. ಈಗಲೇ ಸಗಟು ಮಾರುಕಟ್ಟೆಯಲ್ಲಿ 55-60 ರು. ತೆಂಗಿನ ಕಾಯಿ ದರ ಇದೆ. ತೆಂಗು ಉತ್ಪಾದಕ ಸಂಸ್ಥೆಯಿಂದ ಬೆಳೆಗಾರರಿಂದ 40-45 ರೂ.ಗೆ ತೆಂಗಿನ ಕಾಯಿ ಖರೀದಿ ಮಾಡಲಾಗುತ್ತಿದೆ. ಈ ದರ ಖಚಿತವಾಗಿಯೂ ದೀಪಾವಳಿ ಬಳಿಕ ಹೆಚ್ಚಲಿದೆ. ಹೀಗಾಗಿ ತೆಂಗು ಬೆಳೆಗಾರರು ದುಡುಕದೆ ಉತ್ತಮ ಇಳುವರಿ ಬರುವ ವರೆಗೆ ತಾಳ್ಮೆ ವಹಿಸಬೇಕು. ತೆಂಗು ದರ ಏರಿಕೆಯಾದರೆ ಕೃಷಿಕರ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಕುಸುಮಾಧರ ಅವರು ಪ್ರಕಟಣೆಯಲ್ಲಿ ರೈತರಿಗೆ ಸಲಹೆ ಮಾಡಿದ್ದಾರೆ.
Coconut price to increase from 60 to 70 rupees per kg says Coconut Producers Association President Kusumadhar in Mangalore.
22-08-25 10:28 pm
Bangalore Correspondent
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
Mahesh Thimarodi, Kalladka Prabhakar Bhat: ಮಹ...
22-08-25 09:47 am
Dharmasthala Case, Minister Eshwar Khandre: ಧ...
21-08-25 10:31 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 03:04 pm
Mangalore Correspondent
Mervin Mendonca Accident, Udupi, Mangalore: ರ...
23-08-25 01:29 pm
ಹಿಂದುಗಳ ಹಬ್ಬ, ಆಚರಣೆಗೆ ತೊಂದರೆ ಇಲ್ಲ, ಬಿಜೆಪಿ ಶಾಸ...
22-08-25 05:07 pm
ಪೊಲೀಸರ ಕರ್ತವ್ಯಕ್ಕೆ ಅಡ್ಡಿ ; ಬೆಳ್ತಂಗಡಿ ಠಾಣೆಯಲ್ಲ...
22-08-25 04:21 pm
Activist Mahesh Shetty Timarodi Arrest: ಬಿ.ಎಲ...
21-08-25 09:35 pm
23-08-25 11:11 am
Mangaluru Correspondent
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm
Mangalore Church, Moodbidri, Fraud: ಕಿಡ್ನಿ ವೈ...
21-08-25 11:00 pm
ಶೀಲ ಶಂಕೆ ; ಕ್ರಿಮಿನಾಶಕ ಕೊಡಿಸಿ ಕೊಲೆ, ಪ್ರಿಯಕರನೊ...
21-08-25 10:39 pm