ಬ್ರೇಕಿಂಗ್ ನ್ಯೂಸ್
22-10-24 05:29 pm Mangalore Correspondent ಕರಾವಳಿ
ಉಳ್ಳಾಲ, ಅ.22: ತೊಕ್ಕೊಟ್ಟಿನ ರೈಲು ಹಳಿಗಳಲ್ಲಿ ಕಲ್ಲುಗಳನ್ನಿಟ್ಟ ಕಿಡಿಗೇಡಿಗಳ ವಿರುದ್ಧ ರಾಜ್ಯ ಕಾಂಗ್ರೆಸ್ ಸರಕಾರವು ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ. ರೈಲ್ವೇ ಇಲಾಖೆ ಮಾತ್ರವಲ್ಲದೆ ರೈಲ್ವೇ ಪೊಲೀಸರು ಕೂಡ ಕೇಂದ್ರ ಸರಕಾರದ ಅಧೀನಕ್ಕೆ ಬರುತ್ತಾರೆಂಬ ಕನಿಷ್ಠ ಜ್ಞಾನವಿಲ್ಲದ ಶಾಸಕರು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕೆಂದು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದ್ದಾರೆ.
ತೊಕ್ಕೊಟ್ಟಿನ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಸದಸ್ಯರಾದ ಅಶ್ರಫ್ ಕೆ.ಸಿ ರೋಡ್ ಮಾತನಾಡಿ ರೈಲ್ವೇ ಅಧಿಕಾರಿಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹೊರ ರಾಜ್ಯದ ವಲಸೆ ಕಾರ್ಮಿಕರ ಮಕ್ಕಳು ರೈಲ್ವೇ ಹಳಿಗಳಲ್ಲಿ ಕಲ್ಲುಗಳನ್ನ ಇಟ್ಟಿರುವುದಾಗಿ ಮಾಹಿತಿ ತಿಳಿದುಬಂದಿದೆ. ಆದರೆ ಈ ವಿಚಾರದಲ್ಲಿ ಉನ್ನತ ಮಟ್ಟದ ತನಿಖೆ ಅಗತ್ಯವಿದೆ. ಬಿಜೆಪಿ ಅಧಿಕಾರದಲ್ಲಿರುವ ಹೊರ ರಾಜ್ಯಗಳಿಂದಲೇ ಹೆಚ್ಚಿನ ವಲಸೆ ಕಾರ್ಮಿಕರು ಇಲ್ಲಿಗೆ ಬರುತ್ತಿದ್ದಾರೆ. ಅವರ ಮಕ್ಕಳೇ ಹಳಿಗಳಲ್ಲಿ ಕಲ್ಲು ಇಟ್ಟಿರುವುದು ಎಷ್ಟು ಸತ್ಯವೆಂದು ಕೂಲಂಕುಷ ತನಿಖೆ ನಡೆಸಬೇಕು. ಇದೊಂದು ದೇಶದ್ರೋಹಿ ಕೃತ್ಯವೂ ಆಗಿರಬಹುದು. ಆದರೆ ಓರ್ವ ಜವಾಬ್ದಾರಿಯುತ ಶಾಸಕರು ಇಂತಹ ವಿಚಾರದಲ್ಲಿ ಕಾಟಾಚಾರದ ರಾಜಕೀಯ ಹೇಳಿಕೆಗಳನ್ನ ಕೊಡಬಾರದು. ದೇಶದ ಭದ್ರತೆಗೆ ಧಕ್ಕೆ ತರುವ ದುಷ್ಕೃತ್ಯಗಳನ್ನ ಎಲ್ಲರೂ ಒಟ್ಟಾಗಿ ವಿರೋಧಿಸಬೇಕು ಎಂದರು.

ಶಾಸಕ ವೇದವ್ಯಾಸ ಕಾಮತ್ ಅವರು ತೊಕ್ಕೊಟ್ಟಿನ ರೈಲ್ವೇ ಹಳಿಯ ಪ್ರಕರಣದಲ್ಲಿ ರಾಜ್ಯ ಸರಕಾರವನ್ನ ನಡುವಿಗೆಳೆದು ಕೀಳು ಮಟ್ಟದ ರಾಜಕೀಯ ಮಾಡಿದ್ದಾರೆ. ಇಷ್ಟಲ್ಲದೆ ದೇಶದಲ್ಲಿ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಹೇಳಿಕೆ ನೀಡಿ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ದೇಶದಲ್ಲಿ ನಿಮ್ಮ ಬಿಜೆಪಿ ಸರಕಾರದ ಆಡಳಿತವೇ ನಡೆಯುತ್ತಿದೆ. ಇಷ್ಟಾದರೂ ಬಾಂಗ್ಲಾ ವಲಸಿಗರು ಇಲ್ಲಿದ್ದಾರೆಂದರೆ ವೈಫಲ್ಯ ಯಾರದ್ದು ಎಂದು ಪ್ರಶ್ನಿಸಿದರು. ಬಿಜೆಪಿ ಆಡಳಿತವಿರುವ ಗುಜರಾತ್ ರಾಜ್ಯದ ಸೂರತ್ ನಲ್ಲಿ ರೈಲ್ವೇ ಹಳಿಗಳನ್ನ ತಪ್ಪಿಸಿದ ಘಟನೆ ನಡೆದು ಆರೋಪಿಗಳನ್ನ ಬಂಧಿಸಲಾಗಿತ್ತು. ಉತ್ತರ ಪ್ರದೇಶದ ಕಾನ್ಪುರದಲ್ಲಿ ರೈಲ್ವೇ ಹಳಿಗಳಲ್ಲಿ ಗ್ಯಾಸ್ ಸಿಲಿಂಡರ್ ಇಡಲಾಗಿದ್ದು ಆ ಪ್ರಕರಣದಲ್ಲೂ ಆರೋಪಿಗಳ ಬಂಧನ ನಡೆದಿತ್ತು. ದೇಶದ ಭದ್ರತೆಯ ಸೂಕ್ಷ್ಮ ವಿಚಾರಗಳಲ್ಲಿ ರಾಜಕೀಯ ಲಾಭಕ್ಕೆ ಯಾವುದೇ ಸಮುದಾಯವನ್ನ ಎತ್ತಿ ಕಟ್ಟಬಾರದು. ಶಾಸಕ ವೇದವ್ಯಾಸ್ ಕಾಮತರ ಹೇಳಿಕೆಯು ರಾಜಕೀಯ ಪ್ರಬುದ್ಧತೆಗೆ ಶೋಭೆ ಅಲ್ಲ ಎಂದರು.
ಈ ಸಂದರ್ಭ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಶೆಟ್ಟಿ ಬೋಳಿಯಾರ್, ತಾಪಂ ಮಾಜಿ ಅಧ್ಯಕ್ಷ ಮಹಮ್ಮದ್ ಮೋನು ಮಲಾರ್, ಮಂಗಳೂರು ಕೆಥೋಲಿಕ್ ಮಹಾಸಭಾ ಅಧ್ಯಕ್ಷ ಆಲ್ವಿನ್ ಡಿಸೋಜ, ಉಳ್ಳಾಲ ನಗರಸಭೆ ಮಾಜಿ ಉಪಾಧ್ಯಕ್ಷ ದಿನೇಶ್ ರೈ, ಮಹಿಳಾ ಕಾಂಗ್ರೆಸ್ ಕ್ಷೇತ್ರ ಅಧ್ಯಕ್ಷೆ ಚಂದ್ರಿಕಾ ರೈ, ಮುನ್ನೂರು ಗ್ರಾ.ಪಂ ಮಾಜಿ ಅಧ್ಯಕ್ಷ ವಿಲ್ಪ್ರೆಡ್ ಡಿಸೋಜ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಮನ್ಸೂರ್ ಮಂಚಿಲ ಉಪಸ್ಥಿತರಿದ್ದರು.
Mangalore Stone on railway track at Thokottu, central government is showing negligence says block congress in ullal. On Saturday night, miscreants placed stones on the railway tracks near Ganesh Nagar, Thokkottu overbridge, causing an incident that left locals startled when the train passed over them.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am