ಬ್ರೇಕಿಂಗ್ ನ್ಯೂಸ್
22-10-24 07:28 pm Mangalore Correspondent ಕರಾವಳಿ
ಮಂಗಳೂರು, ಅ.22: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಉಪನ್ಯಾಸಕರ ಕೊರತೆ ವಿದ್ಯಾರ್ಥಿಗಳ ಕಲಿಕೆಗೂ ತೊಂದರೆಯಾಗಿದೆ. ಮಂಗಳೂರಿನ ಕಾರ್ ಸ್ಟ್ರೀಟ್ ಸೇರಿದಂತೆ ಜಿಲ್ಲೆಯ ನಾಲ್ಕು ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಎಂಎಸ್ ಡಬ್ಲ್ಯು ದ್ವಿತೀಯ ವರ್ಷದ ಪದವಿ ಕಲಿಯುತ್ತಿರುವ ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಕಲಿಯಲು ಅವಕಾಶ ಇಲ್ಲದ್ದನ್ನು ಖಂಡಿಸಿ ಪ್ರತಿಭಟನೆಯ ಹಾದಿ ತುಳಿದಿದ್ದಾರೆ.
ಕಾರ್ ಸ್ಟ್ರೀಟ್, ತೆಂಕನಿಡಿಯೂರು, ಬೆಳ್ಳಾರೆ ಮತ್ತು ವಿಟ್ಲ ಸರಕಾರಿ ಕಾಲೇಜುಗಳಲ್ಲಿ ಎಂಎಸ್ ಡಬ್ಲ್ಯು ಪದವಿ ಇದೆ. ಸುಮಾರು 60ರಿಂದ 70 ವಿದ್ಯಾರ್ಥಿಗಳು ಪದವಿ ಓದುತ್ತಿದ್ದು, ಈ ಬಾರಿಯ ಶೈಕ್ಷಣಿಕ ವರ್ಷ ಆರಂಭ ಆಗಿದ್ದರೂ ಕೆಲವು ವಿದ್ಯಾರ್ಥಿಗಳು ತರಗತಿಗೆ ಹಾಜರಾಗದೆ ಗೊಂದಲದಲ್ಲಿದ್ದಾರೆ. ಎರಡನೇ ವರ್ಷದ ಪದವಿಯಲ್ಲಿ ಇಲೆಕ್ಟಿವ್ ಪೇಪರ್ ಆಗಿ ಮೆಡಿಕಲ್ ಸೈಕಾಲಜಿ, ಎಚ್.ಆರ್ ಕಮ್ಯುನಿಕೇಶನ್, ಕಮ್ಯುನಿಟಿ ಡೆವಲಪ್ಮೆಂಟ್ ವಿಷಯದಲ್ಲಿ ಕಲಿಯುವುದಕ್ಕೆ ಅವಕಾಶ ಇದೆ. ಆದರೆ ಈಗ ಕಾಲೇಜಿನಲ್ಲಿ ಇದರಲ್ಲೊಂದನ್ನು ಕಲಿಯುವುದಕ್ಕೆ ಅವಕಾಶ ಕೊಡದೆ, ಮೆಡಿಕಲ್ ಮಾತ್ರ ಆಯ್ದುಕೊಳ್ಳಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಇದರಿಂದ ನಮಗೆ ಆಸಕ್ತಿ ಇಲ್ಲದಿದ್ದರೂ ಕಲಿಯಬೇಕಾದ ಅಡಕತ್ತರಿಯಲ್ಲಿ ಸಿಲುಕಿದ್ದೇವೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಟಿ ಕರೆದು ಸರಕಾರ ಮತ್ತು ಸಾರ್ವಜನಿಕರ ಗಮನ ಸೆಳೆದಿರುವ ವಿದ್ಯಾರ್ಥಿಗಳು, ನಮಗೆ ಮೊದಲ ವರ್ಷದಲ್ಲಿ ಈ ಬಗ್ಗೆ ಮಾಹಿತಿ ನೀಡಿರಲಿಲ್ಲ. ಕಳೆದ ವರ್ಷ ನಮ್ಮ ಕಾರ್ ಸ್ಟ್ರೀಟ್ ಕಾಲೇಜಿನಲ್ಲಿ ಆರು ಉಪನ್ಯಾಸಕರಿದ್ದರೆ, ಈ ಬಾರಿ ನಾಲ್ವರು ಮಾತ್ರ ಇದ್ದಾರೆ. ಉಪನ್ಯಾಸಕರ ಕೊರತೆ ನೆಪದಲ್ಲಿ ಎಚ್.ಆರ್ ಬಗ್ಗೆ ಆಯ್ದುಕೊಂಡಿರುವ ನಮ್ಮನ್ನು ಮೆಡಿಕಲ್ ಸೆಲೆಕ್ಟ್ ಮಾಡುವಂತೆ ಹೇಳುತ್ತಿದ್ದಾರೆ. ಎಚ್.ಆರ್, ಮೆಡಿಕಲ್ ಬೇರೆಯದೇ ಕ್ಷೇತ್ರವಾಗಿದ್ದು, ನಾವು ಒಂದು ಫೀಲ್ಡ್ ಆಯ್ದುಕೊಂಡು ಕಲಿಯಲು ಬಂದಿದ್ದೇವೆ. ಈಗ ಅರ್ಧದಲ್ಲಿ ಬಿಡುವುದಕ್ಕೂ ಆಗದೆ, ಮುಂದುವರಿಸುವುದಕ್ಕೂ ಆಗದೆ ಗೊಂದಲದಲ್ಲಿದ್ದೇವೆ ಎಂದು ಅಲವತ್ತುಕೊಂಡರು.
ಶಿಕ್ಷಣ ಇಲಾಖೆಯ ಅಧಿಕಾರಿಗಳ ಸೂಚನೆಯೆಂದು ಕಾಲೇಜಿನ ಪ್ರಿನ್ಸಿಪಾಲರು ಹೇಳಿದ್ದಾರೆ. ಸರಕಾರದ ಆದೇಶ ಇದೆಯೇ ಎಂದು ಕೇಳಿದರೆ, ಅದು ಇಲ್ಲ ಎನ್ನುತ್ತಿದ್ದಾರೆ. ಶಿಕ್ಷಣ ಅಧಿಕಾರಿಗಳ ಮೌಖಿಕ ಸೂಚನೆಯಂತೆ ಕಾಲೇಜಿನವರು ವಿದ್ಯಾರ್ಥಿಗಳಿಗೆ ತೊಂದರೆ ಕೊಡುತ್ತಿದ್ದಾರೆ. ಇದನ್ನು ಖಂಡಿಸಿ ಮಂಗಳೂರಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಅ.23ರಂದು ಬೆಳಗ್ಗೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಂಎಸ್ ಡಬ್ಲ್ಯು ಪದವಿ ಹಳೆ ವಿದ್ಯಾರ್ಥಿ ನಿಖಿಲ್ ಹೇಳಿದ್ದಾರೆ. ಸರಕಾರಿ ಕಾಲೇಜುಗಳಲ್ಲಿ ಈ ಪದವಿಗೆ 7 ಸಾವಿರ ರೂ. ಫೀಸ್ ಇದ್ದರೆ, ಖಾಸಗಿ ಕಾಲೇಜುಗಳಲ್ಲಿ ಇದೇ ಪದವಿಗೆ 60 ಸಾವಿರ ಶುಲ್ಕ ತೆಗೆದುಕೊಳ್ಳುತ್ತಾರೆ. ಬಡ ವಿದ್ಯಾರ್ಥಿಗಳಿಗೆ ಕಲಿಯುವ ಅವಕಾಶವನ್ನು ಸರಕಾರಿ ಕಾಲೇಜುಗಳಲ್ಲಿ ನಿರಾಕರಿಸುವುದು ಸರಿಯಲ್ಲ ಎಂದವರು ಹೇಳಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಸ್ವಾತಿ, ಪ್ರವೀಣ, ದೀಕ್ಷಿತ, ಮೋಕ್ಷಿತ ಇದ್ದರು.
Lack of lecturers in government colleges in Mangalore, graduate students hold press meet in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am