ಬ್ರೇಕಿಂಗ್ ನ್ಯೂಸ್
24-10-24 05:15 pm Mangalore Correspondent ಕರಾವಳಿ
ಮಂಗಳೂರು, ಅ.24: ರಾಜ್ಯದ ಕರಾವಳಿಯಲ್ಲಿ ಪ್ರವಾಸೋದ್ಯಮ ಉತ್ತೇಜನಕ್ಕಾಗಿ ಗೋವಾ ಮಾದರಿಯಲ್ಲಿ ಹೆಸರಾಂತ ಬೀಚ್ಗಳಲ್ಲಿ ಮದ್ಯ ಮಾರಾಟ ಮತ್ತು ಸೇವನೆಗೆ ಅನುಮತಿ ನೀಡುವ ಪ್ರಸ್ತಾಪಗಳಿದ್ದು ಈ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ, ಮಂಗಳೂರಿನ ಮಾಜಿ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ‘ಕನೆಕ್ಟ್ 2024’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್ಗಳಲ್ಲಿ ಕೆಲವು ನಿಯಮಗಳನ್ನು ಸರಳಗೊಳಿಸಬೇಕಾಗಿದೆ, ಬೀಚ್ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ. ಅಲ್ಲದೆ, ಸಮುದ್ರ ತೀರಗಳಲ್ಲಿ ಸುರಕ್ಷತೆ ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್ ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.
ತಡರಾತ್ರಿ ವರೆಗೂ ಬೀಚ್ ಎಂಟ್ರಿಗೆ ಮನವಿ
ತಡರಾತ್ರಿ ವರೆಗೂ ಬೀಚ್ಗಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ಅವಕಾಶ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮನವಿ ಮಾಡಿದ್ದು, ಮಂಗಳೂರು ನಗರದಲ್ಲಿ ರೆಸ್ಟೋರೆಂಟ್ಗಳು ಮತ್ತು ಇತರ ಪರವಾನಗಿ ಪಡೆದ ವ್ಯಾಪಾರ ಸಂಸ್ಥೆಗಳ ವ್ಯವಹಾರದ ಸಮಯವನ್ನು ರಾತ್ರಿ 1 ಗಂಟೆಯ ವರೆಗೆ ವಿಸ್ತರಿಸಲಾಗಿದೆ. ಹೀಗಾಗಿ ನಗರ ವ್ಯಾಪ್ತಿಯ ಬೀಚ್ಗಳಲ್ಲಿ ತಡರಾತ್ರಿ ವರೆಗೆ ಇರಲು ಅವಕಾಶ ಒದಗಿಸಬೇಕಾಗಿದೆ ಎಂದು ಹೇಳಿದರು. ಪ್ರವಾಸೋದ್ಯಮ ಯೋಜನೆಗಳಿಗೆ ಸಿಆರ್ಝಡ್ ಮತ್ತು ಇತರ ಅನುಮತಿಗಳನ್ನು ಶೀಘ್ರವಾಗಿ ಪಡೆಯಲು ಪ್ರವಾಸೋದ್ಯಮ ಇಲಾಖೆ ಶೀಘ್ರದಲ್ಲೇ ಸೌಲಭ್ಯ ಕೇಂದ್ರವನ್ನು ತೆರೆಯಲಿದೆ ಎಂದು ರಾಜೇಂದ್ರ ಕೆವಿ ಮಾಹಿತಿ ನೀಡಿದ್ದಾರೆ. ಹೊಸ ಪ್ರವಾಸೋದ್ಯಮ ನೀತಿ ಕರಾವಳಿ ಪ್ರವಾಸೋದ್ಯಮಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಹೊಂದಿರಲಿದೆ. ಪ್ರವಾಸೋದ್ಯಮ ಅಭಿವೃದ್ಧಿ ಪ್ರಯತ್ನಗಳ ಭಾಗವಾಗಿ ಬಟ್ಟಪಾಡಿ ಬೀಚ್ನಿಂದ ಸಸಿಹಿತ್ಲು ಬೀಚ್ ವರೆಗಿನ ಕರಾವಳಿ ಪ್ರದೇಶದ ಅಭಿವೃದ್ಧಿಗೆ ನೀಲ ನಕ್ಷೆ ಸಿದ್ದಪಡಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.
Liquor sale near in beaches like Goa to be implemented in Mangalore says karnataka tourism department.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am